Wednesday, February 12, 2025

ಸರಕಾರಿ ಶಾಲೆ ಉಳಿವಿಗೆ ಎಲ್ಲರ ಸಹಕಾರ ಅಗತ್ಯ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಸರಕಾರಿ ಶಾಲೆಯ ಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಅಲಂಕರಿಸಿದ್ದಾರೆ, ಇಂತಹ ಶಾಲೆಯ ಕೊರತೆ ಗಳನ್ನು ನೀಗಿಸಲು ಸರಕಾರದ ಜೊತೆ ಸಂಘ ಸಂಸ್ಥೆಗಳು ಕೈ ಜೋಡಿಸಿದಾಗ ಪ್ರತಿ ಸರಕಾರಿ ಶಾಲೆಗಳು ಉಳಿದು ಬೆಳೆಯುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಗೋಳ್ತಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ವತಿಯಿಂದ ಶಾಲಾ ಮಕ್ಕಳಿಗೆ ಕಂಪ್ಯೂಟರ್, ಪ್ರಿಂಟಿಂಗ್ ಮೆಷಿನ್, ಶಾಲಾ ಬ್ಯಾಗ್ ಹೀಗೆ ವಿವಿಧ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ವಿತರಣಾ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೊಸ ಶಾಲೆಯ ನಿರ್ಮಾಣದ ಬದಲು ಹಳೆಯ ಸರಕಾರಿ ಶಾಲೆಗಳ ಅಭಿವೃದ್ಧಿ ಗಾಗಿ ಪಣತೊಡುವಂತೆ ಯುವಕರಿಗೆ ಕರೆ ನೀಡಿದರು.
ಸಮಿತಿ ಅಥವಾ ದಾನಿಗಳ ಸಹಾಯದಿಂದ ಶಾಲೆಯ ದತ್ತು ಪಡೆದು ಶಿಕ್ಷಣ ನೀಡುವ ಮಹತ್ತರ ಕಾರ್ಯಕ್ಕೆ ಯುವ ಜನತೆ ಮನಸ್ಸು ಮಾಡಬೇಕಾಗಿದೆ ಎಂದು ಅವರು ಹೇಳಿದರು.


ಮಕ್ಕಳ ಉತ್ತಮ ಭವಿಷ್ಯ ಕ್ಕಾಗಿ ಸರಕಾರ ದ ಸವಲತ್ತುಗಳನ್ನು ನೀಡಲು ನಾನು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಅಂಗನವಾಡಿಗಳನ್ನು ಸರಕಾರಿ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲು ಚಿಂತನೆ ನಡೆಸಲಾಗುತ್ತಿದ್ದು ಸರಕಾರದ ಮಟ್ಟದಲ್ಲಿ ಒತ್ತಡ ಹಾಕುತ್ತಿದ್ದೇನೆ  ಎಂದು ಅವರು ಹೇಳಿದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಮಾತನಾಡಿ ಸರಕಾರದ ಸವಲತ್ತುಗಳನ್ನು ಮಾತ್ರ ಉಪಯೋಗಿಸಿಕೊಂಡು ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ, ಜೊತೆಗೆ ಶಾಲಾ  ಎಸ್.ಡಿ.ಎಂ.ಸಿ.  ಸಹಾಯದ ಮೂಲಕ ಅಭಿವೃದ್ಧಿ ಪಡಿಸುವ ಮನಸ್ಸು ಮಾಡಿದರೆ ಮಾತ್ರ ಸರಕಾರಿ ಶಾಲೆಗಳನ್ನು ಬಲಪಡಿಸಬಹುದು ಎಂದು ಅವರು ಹೇಳಿದರು.
ಸರಕಾರಿ ಶಾಲೆ ನಮ್ಮ ಶಾಲೆ ಎಂಬ ಮನಸ್ಸು ಮಾಡಬೇಕಾಗಿದೆ ಎಂದು ಅವರು ಹೇಳಿದರು. ‌
ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಕಾರ್ಯಧ್ಯಕ್ಷ  ಚಂದ್ರಶೇಖರ್ ಟೈಲರ್  ಎಸ್.ಡಿ.ಎಂ.ಸಿ.ಕಾರ್ಯಧ್ಯಕ್ಷ  ಚಂದ್ರಶೇಖರ್ ಟೈಲರ್
ಕಲ್ಲಡ್ಕ ರೈತರ ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಸುಧಾಕರ ರೈ, ಶಾಲಾ ಸ್ಥಳದಾನಿ ಮಹಮ್ಮದ್ ಯೂಸುಫ್ ಹಾಜಿ ಹಜಾಜ್ ,  ತಾ.ಪಂ.ಸದಸ್ಯ ಮಹಾಬಲ ಆಳ್ವ, ಗ್ರಾ.ಪಂ.ಸದಸ್ಯ ಮೋನಪ್ಪ ದೇವಸ್ಯ, ಗ್ರಾ.ಪಂ.ಸದಸ್ಯೆ ಜಯಶ್ರೀ ಹಾಗೂ ಎಸ್.ಡಿ.ಎಂ.ಸಿ.ಸದಸ್ಯರು ಗಳು ಉಪಸ್ಥಿತರಿದ್ದರು.

ಶಿಕ್ಷಕ ನಾರಾಯಣ ಅವರು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳನ್ನು ಉಚಿತವಾಗಿ ನೀಡಿದ ದಾನಿಗಳನ್ನು ಶಾಲಾಭಿವೃದ್ದಿ ವತಿಯಿಂದ ಶಾಸಕರು ಶಾಲು ಹೊದಿಸಿ ಗೌರವಿಸಿದರು.

ಮುಖ್ಯೋಪಾಧ್ಯಾಯಿನಿ ಸುಜಾತ ಎಂ.ಸ್ವಾಗತಿಸಿ.  ಶಿಕ್ಷಕ ಶಂಕರ್ ಪಾವಸ್ಕರ್ ವಂದಿಸಿದರು.ಶಿಕ್ಷಕಿ ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...