Thursday, February 13, 2025

ಕುಂಡಡ್ಕ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ: ಗೊನೆ ಮುಹೂರ್ತ

ವಿಟ್ಲ: ಪುನರ್ ನಿರ್‍ಮಾಣಗೊಂಡ ಕುಳ ಮತ್ತು ವಿಟ್ಲಮೂಡ್ನೂರು ಗ್ರಾಮಕ್ಕೆ ಸಂಬಂಧಪಟ್ಟ ಕುಂಡಡ್ಕ ಪಿಲಿಪ್ಪೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಶಿಬರಿಕಲ್ಲು ಮಾಡ ದೈವಸ್ಥಾನ ಬ್ರಹ್ಮಕಲಶೋತ್ಸವ ಫೆ.5 ರಿಂದ ಆರಂಭಗೊಳ್ಳಲಿದ್ದು, ಬುಧವಾರ ಶ್ರೀ ಕ್ಷೇತ್ರದ ವಠಾರದಲ್ಲಿ ಎರಡು ಗ್ರಾಮಗಳ ಆಸ್ತಿಕ ಕಾರ್‍ಯಕರ್ತರ ಸಮಾಲೋಚನಾ ಸಭೆ ನಡೆಯಿತು.
ಗ್ರಾಮದ ದೇವಸ್ಥಾನ ಮತ್ತು ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಸಂಪನ್ನಗೊಂಡು ಬ್ರಹ್ಮಕಲಶಕ್ಕೆ ಸಿದ್ಧತೆ ನಡೆಯುತ್ತಿದೆ. ಒಗ್ಗಟ್ಟು, ಪರಿಶ್ರಮ, ಕೊಡುಗೆಗಳ ಅಗತ್ಯವಿದೆ. ದೇಗುಲದ ಬ್ರಹ್ಮಕಲಶವನ್ನು ಪ್ರಮುಖವೆಂದು ನಿರ್ಧರಿಸಿ ಭಾಗವಹಿಸಬೇಕು. ಗ್ರಾಮಸ್ಥರೆಲ್ಲರ ಸಹಕಾರ ಅತೀ ಅಗತ್ಯ ಎಂದು ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಸೀಮೆ ಗುರಿಕ್ಕಾರ ಕೆ.ಟಿ.ವೆಂಕಟೇಶ್ವರ ನೂಜಿ ಹೇಳಿದರು. ಬ್ರಹ್ಮಕಲಶ ಯಶಸ್ವಿಯಾಗಿಸಲು ಎಲ್ಲ ಗ್ರಾಮಸ್ಥರೂ ಓಂ ನಮೋ ಭಗವತೇ ವಾಸುದೇವಾಯ ಎಂದು ಪ್ರತಿದಿನವೂ ಪಠಿಸಬೇಕು. ಬ್ರಹ್ಮಕಲಶ ಸಂದರ್ಭ ಊರ ಪರವೂರ ಭಕ್ತರು ಆಗಮಿಸಲಿದ್ದಾರೆ. ಅವರನ್ನು ಆದರದಿಂದ ಆಮಂತ್ರಿಸುವುದರ ಜತೆಗೆ ಯಾವುದೇ ಕೊರತೆಯಾಗದಂತೆ, ಸ್ವಚ್ಛತೆಗೆ ಧಕ್ಕೆ ಬರದಂತೆ ಕಾರ್ಯನಿರ್ವಹಿಸಬೇಕು. ಹೊರೆಕಾಣಿಕೆಯಲ್ಲಿ ಬೆಂಗಳೂರಿನಿಂದ ದಾನಿಗಳು ಸಂಗ್ರಹಿಸಿದ ೬೦ ಕ್ವಿಂಟಾಲ್ ತರಕಾರಿ ಆಗಮಿಸಲಿದೆ ಎಂದು ತಿಳಿಸಿದರು.
ಕುಡ್ವ ಮನೆತನದ ಯೋಗೀಶ್ ಕುಡ್ವ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ವೇಣುಗೋಪಾಲ ಶೆಟ್ಟಿ ಮರುವಾಳ, ಸಂಘಟನಾ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರು, ಕಾರ್ತಿಕ್ ಮೂಡಾಯಿಮಾರು, ಸೇಸಪ್ಪ ಗೌಡ ಬೆದ್ರಾಳ, ಚಿದಾನಂದ ಗೌಡ ಪೆಲತ್ತಿಂಜ ಮತ್ತಿತರರು ಮಾತನಾಡಿ, ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಗ್ರಾಮದ ಪ್ರತಿಭಾವಂತರನ್ನು ಪುರಸ್ಕರಿಸಲಾಗುವುದು ಎಂದು ತಿಳಿಸಲಾಯಿತು.
ವೇಣುಗೋಪಾಲ ಶೆಟ್ಟಿ ಮರುವಾಳ ಸ್ವಾಗತಿಸಿ, ಪ್ರಸ್ತಾವನೆಗೈದರು. ಬ್ರಹ್ಮಕಲಶ ಸಮಿತಿ ಕೋಶಾಧಿಕಾರಿ ಗೋವಿಂದರಾಜ್ ನಾನಾ ಮಾಹಿತಿ ನೀಡಿ, ವಂದಿಸಿದರು. ಹರೀಶ ನೀರಕೋಡಿ ಆಶಯಗೀತೆ ಹಾಡಿದರು. ಬೆಳಗ್ಗೆ ೧೦.೧೭ಕ್ಕೆ ಗೊನೆ ಮುಹೂರ್ತ ನೆರವೇರಿಸಲಾಯಿತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...