Wednesday, February 4, 2026

ಕುಂಡಡ್ಕ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ: ಗೊನೆ ಮುಹೂರ್ತ

ವಿಟ್ಲ: ಪುನರ್ ನಿರ್‍ಮಾಣಗೊಂಡ ಕುಳ ಮತ್ತು ವಿಟ್ಲಮೂಡ್ನೂರು ಗ್ರಾಮಕ್ಕೆ ಸಂಬಂಧಪಟ್ಟ ಕುಂಡಡ್ಕ ಪಿಲಿಪ್ಪೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಶಿಬರಿಕಲ್ಲು ಮಾಡ ದೈವಸ್ಥಾನ ಬ್ರಹ್ಮಕಲಶೋತ್ಸವ ಫೆ.5 ರಿಂದ ಆರಂಭಗೊಳ್ಳಲಿದ್ದು, ಬುಧವಾರ ಶ್ರೀ ಕ್ಷೇತ್ರದ ವಠಾರದಲ್ಲಿ ಎರಡು ಗ್ರಾಮಗಳ ಆಸ್ತಿಕ ಕಾರ್‍ಯಕರ್ತರ ಸಮಾಲೋಚನಾ ಸಭೆ ನಡೆಯಿತು.
ಗ್ರಾಮದ ದೇವಸ್ಥಾನ ಮತ್ತು ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಸಂಪನ್ನಗೊಂಡು ಬ್ರಹ್ಮಕಲಶಕ್ಕೆ ಸಿದ್ಧತೆ ನಡೆಯುತ್ತಿದೆ. ಒಗ್ಗಟ್ಟು, ಪರಿಶ್ರಮ, ಕೊಡುಗೆಗಳ ಅಗತ್ಯವಿದೆ. ದೇಗುಲದ ಬ್ರಹ್ಮಕಲಶವನ್ನು ಪ್ರಮುಖವೆಂದು ನಿರ್ಧರಿಸಿ ಭಾಗವಹಿಸಬೇಕು. ಗ್ರಾಮಸ್ಥರೆಲ್ಲರ ಸಹಕಾರ ಅತೀ ಅಗತ್ಯ ಎಂದು ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಸೀಮೆ ಗುರಿಕ್ಕಾರ ಕೆ.ಟಿ.ವೆಂಕಟೇಶ್ವರ ನೂಜಿ ಹೇಳಿದರು. ಬ್ರಹ್ಮಕಲಶ ಯಶಸ್ವಿಯಾಗಿಸಲು ಎಲ್ಲ ಗ್ರಾಮಸ್ಥರೂ ಓಂ ನಮೋ ಭಗವತೇ ವಾಸುದೇವಾಯ ಎಂದು ಪ್ರತಿದಿನವೂ ಪಠಿಸಬೇಕು. ಬ್ರಹ್ಮಕಲಶ ಸಂದರ್ಭ ಊರ ಪರವೂರ ಭಕ್ತರು ಆಗಮಿಸಲಿದ್ದಾರೆ. ಅವರನ್ನು ಆದರದಿಂದ ಆಮಂತ್ರಿಸುವುದರ ಜತೆಗೆ ಯಾವುದೇ ಕೊರತೆಯಾಗದಂತೆ, ಸ್ವಚ್ಛತೆಗೆ ಧಕ್ಕೆ ಬರದಂತೆ ಕಾರ್ಯನಿರ್ವಹಿಸಬೇಕು. ಹೊರೆಕಾಣಿಕೆಯಲ್ಲಿ ಬೆಂಗಳೂರಿನಿಂದ ದಾನಿಗಳು ಸಂಗ್ರಹಿಸಿದ ೬೦ ಕ್ವಿಂಟಾಲ್ ತರಕಾರಿ ಆಗಮಿಸಲಿದೆ ಎಂದು ತಿಳಿಸಿದರು.
ಕುಡ್ವ ಮನೆತನದ ಯೋಗೀಶ್ ಕುಡ್ವ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ವೇಣುಗೋಪಾಲ ಶೆಟ್ಟಿ ಮರುವಾಳ, ಸಂಘಟನಾ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರು, ಕಾರ್ತಿಕ್ ಮೂಡಾಯಿಮಾರು, ಸೇಸಪ್ಪ ಗೌಡ ಬೆದ್ರಾಳ, ಚಿದಾನಂದ ಗೌಡ ಪೆಲತ್ತಿಂಜ ಮತ್ತಿತರರು ಮಾತನಾಡಿ, ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಗ್ರಾಮದ ಪ್ರತಿಭಾವಂತರನ್ನು ಪುರಸ್ಕರಿಸಲಾಗುವುದು ಎಂದು ತಿಳಿಸಲಾಯಿತು.
ವೇಣುಗೋಪಾಲ ಶೆಟ್ಟಿ ಮರುವಾಳ ಸ್ವಾಗತಿಸಿ, ಪ್ರಸ್ತಾವನೆಗೈದರು. ಬ್ರಹ್ಮಕಲಶ ಸಮಿತಿ ಕೋಶಾಧಿಕಾರಿ ಗೋವಿಂದರಾಜ್ ನಾನಾ ಮಾಹಿತಿ ನೀಡಿ, ವಂದಿಸಿದರು. ಹರೀಶ ನೀರಕೋಡಿ ಆಶಯಗೀತೆ ಹಾಡಿದರು. ಬೆಳಗ್ಗೆ ೧೦.೧೭ಕ್ಕೆ ಗೊನೆ ಮುಹೂರ್ತ ನೆರವೇರಿಸಲಾಯಿತು.

More from the blog

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...