Thursday, January 29, 2026

ಜಿ.ಯಸ್.ಬಿ. ಸಮ್ಮಿಲನ 2019 ಇದರ 18ನೇ ವರ್ಷದ ವಾರ್ಷಿಕ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಬಂಟ್ವಾಳ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ (ರಿ.), ಬಿ.ಸಿ.ರೋಡು ಇದರ ಆಶ್ರಯದಲ್ಲಿ 18ನೇ ವರ್ಷದ ಜಿ.ಯಸ್.ಬಿ. ಸಮ್ಮಿಲನ-2019 ಫೆಬ್ರವರಿ 3ರಂದು ಗೀತಾಂಜಲಿ ಕಲ್ಯಾಣ ಮಂಟಪ, ಬಿ.ಸಿ.ರೋಡು ಇಲ್ಲಿ ವಾರ್ಷಿಕ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಸೇವಾ ಸಮಿತಿಯ ಅಧ್ಯಕ್ಷರಾದ ಯು. ಸುರೇಶ್ ನಾಯಕ್ ಇವರು ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನತನ ಭಟ್ ಮತ್ತು ಚೈತನಾ ಭಟ್ ಇವರು ಪ್ರಾರ್ಥಿಸಿದರು.
ನಿವೃತ್ತ ಮುಖ್ಯ ಶಿಕ್ಷಕಿ ಜಯಶ್ರೀ ಶೆಣೈ, ನಿವೃತ್ತ ಉಪನ್ಯಾಸಕರಾದ  ಮಧುಕರ ಮಲ್ಯ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ವಾಮನ ಭಟ್ ಹಾಗೂ ರಾಧಿಕಾ ಶೆಣೈ, ತೀರ್ಪುಗಾರರಾಗಿ ಸಹಕರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಕ್ಷಿ ಹೆಗ್ಡೆ ಇವರ ಉಸ್ತುವಾರಿಯಲ್ಲಿ ಸ್ಥಳೀಯ ಜಿ.ಯಸ್.ಬಿ. ಪ್ರತಿಭೆಗಳಿಂದ ಯಕ್ಷಗಾನ ಹಾಗೂ ವಿವಿಧ ನೃತ್ಯಗಳು. ಮಂಗಳೂರಿನ ಮಾಲತಿ ಯು. ಕಾಮತ್ ಮತ್ತು ಬಳಗದವರಿಂದ ಕೊಂಕಣಿ ನಾಟಕ ಪ್ರದರ್ಶನವಾಯಿತು. ಬಳಿಕ ಸ್ಫಧಾ ವಿಜೇತರಿಗೆ ಸಮಿತಿಯ ಅಧ್ಯಕ್ಷ ಹಾಗೂ ಮಕ್ಕಳ ವೈದ್ಯರಾದ ಡಾ| ಕೆ.ಜಿ. ಶೆಣೈ ಇವರು ಬಹುಮಾನ ವಿತರಿಸಿದರು.
ಈ ಕ್ರೀಡೋತ್ಸವದಲ್ಲಿ ಬಿ.ಸಿ.ರೋಡ್ ಜಿ.ಎಸ್.ಬಿ. ಸಮಾಜದ ಬಾಂಧವ ಭಗಿನಿಯರು ಹಾಗೂ ಮಕ್ಕಳು ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದರು. ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಪೈ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ರಘುವೀರ್ ಕಾಮತ್, ಸದಸ್ಯರಾದ ದುರ್ಗಾದಾಸ್ ಶೆಣೈ, ನಾಗೇಂದ್ರ ನಾಯಕ್, ಸದಸ್ಯರಾದ ನಾರಾಯಣ ಶೆಣೈ, ವಿವೇಕ್ ಹೆಗ್ಡೆ, ಅನಂತಕೃಷ್ಣ ನಾಯಕ್, ಎಚ್. ನಾರಾಯಣ ಶೆಣೈ, ಪವನ್ ನಾಯಕ್, ಶಿಕ್ಷಕಿ ರಂಜಿತಾ ಕುಮಾರ್ ಭಟ್ ಹಾಗೂ ಸ್ವಾತಿ ನಾಯಕ್ ಇವರು ಸಹಕರಿಸಿದರು.

More from the blog

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...