Monday, January 26, 2026

ಯೋಕ್ಷಾ ಶೆಟ್ಟಿ ಪುಟ್ಟ ಮಗು ಉಳಿಸಲು ನೆರವಿಗೆ ಮೊರೆ

ಮುಂಬಯಿ (ಗುರುಪುರ): ಈ ಮಗುವಿಗೆ ಹುಟ್ಟಿದ ನಾಲ್ಕು ತಿಂಗಳಿಂದಲೇ ಸಾವು-ನೋವಿನ ವಿಚಿತ್ರ ಕಾಯಿಲೆ ಅಂಟಿಕೊಂಡಿದೆ. ಒಂದೂವರೆ ಲಕ್ಷ ಮಕ್ಕಳಲ್ಲಿ ಅಪೂರ್ವ ಎಂಬಂತೆ ಒಬ್ಬರಲ್ಲಿ ಕಂಡು ಬರುವ ‘ಗೌಚರ್’ ಎಂಬ ಆನುವಂಶಿಕ ಕಾಯಿಲೆ ಎರಡೂವರೆ ವರ್ಷದ ಯೋಕ್ಷಾ ಶೆಟ್ಟಿಗೆ ಬಾಧಿಸಿದೆ. ಇದು ಜೀವನ ಪರ್ಯಂತ ಕಾಡುವ ಕಾಯಿಲೆಯಾಗಿದ್ದು, ಔಷಧಿ ದುಬಾರಿಯಾಗಿದೆ. ಆದ್ದರಿಂದಲೇ ಮಗು ಉಳಿಸಲು ಶತಾಯಗತ ಪ್ರಯತ್ನ ನಡೆಸುತ್ತಿರುವ ತಾಯಿ-ತಂದೆ ಈಗ ದೇವರ ಮೇಲೆ ಭಾರ ಹಾಕಿ, ಸಮಾಜದ ನೆರವಿನತ್ತ ಮುಖ ಮಾಡಿದ್ದಾರೆ.

ಅತ್ಯಂತ ಕಡು ಬಡತನದಲ್ಲಿರುವ ಯೋಕ್ಷಾಳ ತಂದೆ ಸಂತೋಷ್ ಶೆಟ್ಟಿ ಪೈಂಟರ್ ಕೆಲಸ ಮಾಡುತ್ತಿದ್ದರೆ, ತಾಯಿ ಪೂಜಾ ಮನೆಗೆಲಸ ಮಾಡುತ್ತಿದ್ದಾರೆ. ಇವರೊಂದಿಗೆ ಪೂಜಾಳ ತಾಯಿ ಇದ್ದಾರೆ. ಗುರುಪುರ ಮೂಳೂರು ಗ್ರಾಮದ ಮಠದ ಗುಡ್ಡೆಯಲ್ಲಿ ಮನೆ ಮಾಡಿಕೊಂಡಿರುವ ಈ ಕುಟುಂಬ, ಮಗುವಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಈವರೆಗೆ ಸಾಧ್ಯವಿರುವ ಎಲ್ಲ ಪ್ರಯತ್ನ ನಡೆಸಿದೆ. ಜನಪ್ರತಿನಿಧಿಗಳು, ಸಮಾಜ ಬಾಂಧವರು ಹಾಗೂ ಎನ್‌ಜಿಒಗಳ ಭೇಟಿ ಮಾಡಿ ಮಗು ಉಳಿಸಲು ಅಂಗಲಾಚಿ ಬೇಡಿಕೊಂಡಿದ್ದಾರೆ. ಮನವಿ ನೀಡಿದ್ದಾರೆ. ಇದಕ್ಕೆ ಕಳೆದ ಎರಡೂವರೆ ವರ್ಷದಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಪರಿಣಾಮ, ಕುಟುಂಬದ ಮೇಲೆ ಬರಸಿಡಿಲು ಬಡಿದಂತಾಗಿದೆ. ಮಗುವಿಗಾಗಿ ಸಾಲಸೋಲ ಮಾಡಿ ಈಗಾಗಲೇ ಕೆಲವು ಲಕ್ಷ ಕರ್ಚು ಮಾಡಲಾಗಿದೆ.

ಮಗುವಿನ ಕಾಯಿಲೆ ನಿಯಂತ್ರಿಸಲು ಎರಡು ವಾರಕ್ಕೆ ಒಂದು ಬಾರಿಯಂತೆ ಜೀವನಪರ್ಯಂತ ‘ಸೆರೆಝಿಮ್’ ಎಂಬ ದುಬಾರಿ ಔಷಧಿ ನೀಡಬೇಕಾಗುತ್ತದೆ. ಹೊಟ್ಟೆಯೊಳಗಿನ ಈ ಕಾಯಿಲೆಗೆ ಆರಂಭದ ಚಿಕಿತ್ಸೆಗಾಗಿ 25ರಿಂದ ೩೦ ಲಕ್ಷ ರೂ ಆಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದಾರೆ. ಬಡತನದ ಬೇಗೆಯಲ್ಲಿರುವ ಈ ಕುಟುಂಬಕ್ಕೆ ಇಷ್ಟೊಂದು ಹಣ ಕೂಡಿಸಲು ಸಾಧ್ಯವೇ ಇಲ್ಲ. ವೈದ್ಯರ ಸೂಚನೆ ಬಳಿಕ ಯೋಕ್ಷಾ ಕುಟುಂಬದ ಮೇಲೆ ಆಕಾಶವೇ ಬಿದ್ದಂತಾಗಿದೆ. ಇಷ್ಟಿದ್ದರೂ, ಮಗು ಉಳಿಸುವ ನಿಟ್ಟಿನಲ್ಲಿ ಉಸಿರಿರುವತನಕ ಪ್ರಯತ್ನಿಸುವೆ ಎನ್ನುವ ಪೂಜಾ ಹಾಗೂ ಆಕೆಯ ಕುಟುಂಬಿಕರೊಂದಿಗೆ ‘ಮಾನವೀಯತೆಗೆ ಸ್ಪಂದಿಸುವ ಈ ಸಮಾಜ’ ಕೈಜೋಡಿಸಬೇಡವೆ..? ನಮ್ಮ ಪ್ರಯತ್ನದೊಂದಿಗೆ ಕೈಜೋಡಿಸಿ ಎಂದು ದಯನೀಯವಾಗಿ ಬೇಡುವುದೊಂದು ಬಿಟ್ಟರೆ ಅನ್ಯ ದಾರಿ ಉಳಿದಿಲ್ಲ. ಸಂಪರ್ಕಿಸಿ : ಪೂಜಾ, ಸಿಂಡಿಕೇಟ್ ಬ್ಯಾಂಕ್ ಗುರುಪುರ ಶಾಖೆ, ಖಾತೆ ನಂಬ್ರ: 01242250005816. IFSC SYNB0000124 (ಐಎಫ್‌ಎಸ್‌ಸಿ): ಎಸ್‌ವೈಎನ್‌ಬಿ000124.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...