Friday, January 30, 2026

ವಿಟ್ಲಪಡ್ನೂರು: ಉಜ್ವಲ ಅನಿಲ ಸಂಪರ್ಕ ವಿತರಣೆ

ವಿಟ್ಲ: ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ವಿಟ್ಲಪಡ್ನೂರು-ಕೊಳ್ನಾಡು-ಸಾಲೆತ್ತೂರು ಗ್ರಾಮದ ಫಲಾನುಭವಿಗಳಿಗೆ ಉಜ್ವಲ ಅನಿಲ ಸಂಪರ್ಕ ವಿತರಣೆ ಮತ್ತು ಫಲಾನುಭವಿಗಳ ಸಮಾವೇಶ ನಡೆಯಿತು.
ಮಂಗಳೂರು ಲೋಕಸಭಾ ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ಸರಕಾರದಿಂದ ದೊರಕುವ ಎಲ್ಲಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಕ್ ಉಳಿಪ್ಪಾಡಿ ಗುತ್ತು ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಂತರ ೧೯೬ ಫಲಾನುಭವಿಗಳಿಗೆ ಗ್ಯಾಸ್‌ಸ್ಟವ್
ವಿತರಣೆ ಮಾಡಲಾಯಿತು.ಈ ಸಭೆಯಲ್ಲಿ ಇಂಡೇನ್ ಗ್ಯಾಸ್ ಮಾಲೀಕರಾದ ಸತೀಶ್ ಕುಮಾರ್ ಆಳ್ವ ಇವರು ಉಜ್ವಲ ಯೋಜನೆಯ ಬಗ್ಗೆ ಮತ್ತು ಸಂಸದರ ಸಾಧನೆಯ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡಿದರು,
ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷರಾದ ಸುಧಾ ಎಸ್ ಶೆಟ್ಟಿ, ಸದಸ್ಯರುಗಳಾದ ಅಬ್ದುಲ್ಲ ಕುಕ್ಕಿಲ, ನಾಗೇಶ್ ಕುಮಾರ್, ಭಾಸ್ಕರ್ ಶೆಟ್ಟಿಗಾರ್, ಪ್ರೇಮಲತಾ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು, ಬಾಲಕೃಷ್ಣ ಸೆರ್ಕಳ, ಸತೀಶ್ ಭಟ್ ಪಂಜಿಗದ್ದೆ, ಅಭಿಷೇಕ್ ರೈ ರಾಧುಕಟ್ಟೆ, ವಿಶ್ವನಾಥ ಪೂಜಾರಿ ಕಟ್ಟತ್ತಿಲ, ವಿಧ್ಯೇಶ್ ಉಪಸ್ಥಿತರಿದ್ದರು.
ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಪಂಚಾಯಿತಿ ಸದಸ್ಯರಾದ ಜಯಂತ ಪಿ ವಂದಿಸಿದರು. ಗಣೇಶ್ ಬಾರೆಬೆಟ್ಟು ಕಾರ್‍ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...