Saturday, July 5, 2025

ವಿಟ್ಲಪಡ್ನೂರು: ಉಜ್ವಲ ಅನಿಲ ಸಂಪರ್ಕ ವಿತರಣೆ

ವಿಟ್ಲ: ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ವಿಟ್ಲಪಡ್ನೂರು-ಕೊಳ್ನಾಡು-ಸಾಲೆತ್ತೂರು ಗ್ರಾಮದ ಫಲಾನುಭವಿಗಳಿಗೆ ಉಜ್ವಲ ಅನಿಲ ಸಂಪರ್ಕ ವಿತರಣೆ ಮತ್ತು ಫಲಾನುಭವಿಗಳ ಸಮಾವೇಶ ನಡೆಯಿತು.
ಮಂಗಳೂರು ಲೋಕಸಭಾ ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ಸರಕಾರದಿಂದ ದೊರಕುವ ಎಲ್ಲಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಕ್ ಉಳಿಪ್ಪಾಡಿ ಗುತ್ತು ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಂತರ ೧೯೬ ಫಲಾನುಭವಿಗಳಿಗೆ ಗ್ಯಾಸ್‌ಸ್ಟವ್
ವಿತರಣೆ ಮಾಡಲಾಯಿತು.ಈ ಸಭೆಯಲ್ಲಿ ಇಂಡೇನ್ ಗ್ಯಾಸ್ ಮಾಲೀಕರಾದ ಸತೀಶ್ ಕುಮಾರ್ ಆಳ್ವ ಇವರು ಉಜ್ವಲ ಯೋಜನೆಯ ಬಗ್ಗೆ ಮತ್ತು ಸಂಸದರ ಸಾಧನೆಯ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡಿದರು,
ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷರಾದ ಸುಧಾ ಎಸ್ ಶೆಟ್ಟಿ, ಸದಸ್ಯರುಗಳಾದ ಅಬ್ದುಲ್ಲ ಕುಕ್ಕಿಲ, ನಾಗೇಶ್ ಕುಮಾರ್, ಭಾಸ್ಕರ್ ಶೆಟ್ಟಿಗಾರ್, ಪ್ರೇಮಲತಾ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು, ಬಾಲಕೃಷ್ಣ ಸೆರ್ಕಳ, ಸತೀಶ್ ಭಟ್ ಪಂಜಿಗದ್ದೆ, ಅಭಿಷೇಕ್ ರೈ ರಾಧುಕಟ್ಟೆ, ವಿಶ್ವನಾಥ ಪೂಜಾರಿ ಕಟ್ಟತ್ತಿಲ, ವಿಧ್ಯೇಶ್ ಉಪಸ್ಥಿತರಿದ್ದರು.
ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಪಂಚಾಯಿತಿ ಸದಸ್ಯರಾದ ಜಯಂತ ಪಿ ವಂದಿಸಿದರು. ಗಣೇಶ್ ಬಾರೆಬೆಟ್ಟು ಕಾರ್‍ಯಕ್ರಮ ನಿರೂಪಿಸಿದರು.

More from the blog

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ...

B. C. ROAD : ಜು.19ರಿಂದ 27ರವರೆಗೆ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ನವಾಹ..

ಬಂಟ್ವಾಳ : ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ...

ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ: ಬೇಬಿ ಕುಂದರ್….

ಬಂಟ್ವಾಳ : ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಸಮಸ್ಯೆ ಪರಿಹಾರ ಮಾಡುತ್ತೇನೆ, ಭ್ರಷ್ಟಾಚಾರ ರಹಿತ ಕೆಲಸಕ್ಕೆ ಒತ್ತು ನೀಡುವುದಾಗಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ‌ಕುಂದರ್ ತಿಳಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದ...