Friday, January 30, 2026

ಹಾಸ್ಟೆಲ್ ಬರಹ ವಿವಾದ ಅಧಿಕಾರಿ’ಯನ್ನು ಹುದ್ದೆಯಿಂದ ಅಮಾನತುಗೊಳಿಸಿ, ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್ ಸಿ ನಾರಾಯಣ್ ರೆಂಜ ಆಗ್ರಹ

ಕಾಂಗ್ರೆಸ್ ಸರ್ಕಾರ ಬಡ ಮಕ್ಕಳ ತಲೆಯಲ್ಲಿ ದ್ವೇಷದ ಕಿಚ್ಚನ್ನು ಹಚ್ಚಿಸಲು ರಾಷ್ಟ್ರಕವಿ ಕುವೆಂಪು ಅವರ ಸಾಲುಗಳನ್ನು ತಿರುಚಿ ಸಮಾಜದಲ್ಲಿ ವಿಷ ಬಿತ್ತುವ ನಾಚಿಕೆಗೇಡಿನ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಮಾಜಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಾಡಿದ್ದಾರೆ.

ಅತಿ ಹೆಚ್ಚು ವಿದ್ಯಾರ್ಥಿಗಳು ಹಿಂದುಳಿದ ವರ್ಗ ಬಡ ಕುಟುಂಬದಿಂದ ಬಂದವರು ಇರುತ್ತಾರೆ. ಅವರ ಭಾವನೆಗಳನ್ನು ಸರಕಾರ ಪ್ರಶ್ನಿಸಲು ಹೊರಟಿದೆ.

ಶಿಕ್ಷಣದಲ್ಲಿ ಸಂಸ್ಕೃತಿ-ಪರಂಪರೆ ಭಾರತೀಯತೆಯನ್ನು ತೆಗೆದು ನಕ್ಸಲ್‌ವಾದ, ಕಮ್ಯುನಿಸ್ಟ್ ಚಿಂತನೆಗಳನ್ನು ತುಂಬುವ ಮೂಲಕ ಭಾರತೀಯ ಶಿಕ್ಷಣ ಪರಂಪರೆಯನ್ನೇ ಅಡಿಮೇಲು ಮಾಡುವ ಕೆಲಸಕ್ಕೆ ಸಿದ್ದರಾಮಯ್ಯರವರ ಆಪ್ತ ಬಳಗ ಕೈ ಹಾಕಿದೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಿತ್ತುಹಾಕಿ, ಶಾಲೆಗಳಲ್ಲಿ ಹಬ್ಬಹರಿದಿನಗಳನ್ನು ಆಚರಿಸದಂತೆ ಆದೇಶಿಸಿದ್ದ ಈ ಕಾಂಗ್ರೆಸ್ ಸರ್ಕಾರ, ಈಗ ಎಡ-ಬಿಡಂಗಿ “ಅಧಿಕಾರಿ”ಗಳ ಸಹಾಯದಿಂದ, ಕರ್ನಾಟಕದ ಭವಿಷ್ಯದ ತಲೆಮಾರುಗಳನ್ನು ಕತ್ತಲಿಗೆ ತಳ್ಳುತ್ತಿದೆ.
ಪಾಠ ಮಾಡುವ ಶಿಕ್ಷಕರೇ, ‘ಕೈ ಮುಗಿದು ಒಳಗೆ ಬನ್ನಿ ಎನ್ನುವುದು ಮಕ್ಕಳಿಗೆ ಕಲಿಸುವ ಸಂಸ್ಕಾರ,
ಈ ಅಧಿಕಾರಿಗೆ ಮಕ್ಕಳ ಶೈಕ್ಷಣಿಕ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಅಧಿಕಾರ ನೀಡಿದ್ದು ಯಾರು?
ಈ ಕೂಡಲೇ ‘ಅಧಿಕಾರಿ’ಯನ್ನು ಹುದ್ದೆಯಿಂದ ಅಮಾನತುಗೊಳಿಸಿ, ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್ ಸಿ ನಾರಾಯಣ್ ರೆಂಜ ಆಗ್ರಹಿಸಿದ್ದಾರೆ

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...