Thursday, February 13, 2025

ಬಂಟ್ವಾಳ ತಾಲ್ಲೂಕಿನಲ್ಲಿ 53 ಮಳೆಹಾನಿ ಪ್ರಕರಣಗಳು ವರದಿ

ಬಂಟ್ವಾಳ, ಆ. ೭: ಬಂಟ್ವಾಳ ತಾಲೂಕಿನಾದ್ಯಂತ ಗುರುವಾರ ಬೆಳಿಗ್ಗೆ ಸಾಧಾರಣ ಮಳೆಯಾಗಿದೆ. ಆದರೆ, ಬುಧವಾರ ರಾತ್ರಿ ಗಾಳಿಮಳೆಯಿಂದಾಗಿ ತಾಲೂಕಿನ ವಿವಿಧ ಭಾಗಗಳಲ್ಲಿ ಕೃತಕ ನೆರೆ, ಮನೆಗಳಿಗೆ ಹಾನಿ, ಗುಡ್ಡ ಜರಿದು ತೊಂದರೆ, ರಸ್ತೆಯಲ್ಲಿ ನೀರು, ಕೆಸರು ತುಂಬಿ ಸಮಸ್ಯೆಗಳಾಗಿದ್ದು, ಬಂಟ್ವಾಳ ತಾಲೂಕಿನಲ್ಲಿ ಗುರುವಾರದಂದು ಒಟ್ಟು ೫೩ ಹಾನಿ ಪ್ರಕರಣಗಳು ವರದಿಯಾಗಿವೆ.


ಇವುಗಳಲ್ಲಿ ೬ ಮನೆಗಳಿಗೆ ಸಂಪೂರ್ಣ ಹಾನಿ, ೩೦ ಮನೆಗಳು ಭಾಗಶಃ ಹಾನಿ, ೫ ತೋಟಗಾರಿಕಾ ಹಾನಿ ಹಾಗೂ ೧೨ ಇತರ ಹಾನಿಗಳಾಗಿರುವ ಬಗ್ಗೆ ವರದಿಯಾಗಿವೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.
ಭಾರೀ ಮಳೆ ಹಾನಿ:
ಕುಡಂಬೆಟ್ಟು ಗ್ರಾಮದ ಶಾರದಾ ಹಾಗೂ ಬಾಬು ಮನೆಗಳಿಗೆ ಭಾಗಶಃ ಹಾನಿ, ಬಸ್ತಿಕೋಡಿಯ ಲಕ್ಷ್ಮಣ ಗಟ್ಟಿ ಎಂಬವರ ತೋಟಕ್ಕೆ ಹಾನಿ, ಕಾವಳಪಡೂಡು ಗ್ರಾಮದ ಜೆಫ್ರಿರೋಡ್ರಿಗಸ್ ಅಡಿಕೆ ಮರಗಳಿಗೆ ಹಾನಿ, ಕೊಯಿಲ ಗ್ರಾಮದ ಹರಿಣಾಕ್ಷಿ ಎಂಬವರ ನಿರ್ಮಾಣ ಹಂತದಲ್ಲಿರುವ ಮನೆಗೆ ಹಾನಿ, ಕೊಯಿಲ ಗ್ರಾಮದ ಪ್ರೇಮ ಎಂಬವರ ಮನೆಗೆ ಭಾಗಶಃ ಹಾನಿ, ಮಣಿನಾಲ್ಕೂರು ಗ್ರಾಮದ ಕೃಷ್ಣಪ್ಪ ನಾಯ್ಕ್ ಮನೆಯ ಗುಡ್ಡ ಜರಿದು ಹಾನಿ, ರಾಯಿ ಗ್ರಾಮದ ರಹಿಮತ್ ಹಾಗೂ ಕೆದಿಲ ಗ್ರಾಮದ ವಾಸು ಎಂಬವರ ಮನೆಗಳಿಗೆ ಭಾಗಶಃ ಹಾನಿ, ಕುಂಟ್ರಕಳ ನಿವಾಸಿ ಜಾನಕಿ ಎಂಬವರ ಕೃಷಿಗೆ ಹಾನಿ, ಕೈರಂಗಳ ಗ್ರಾಮದ ಕಾಲುದಾರಿ ಕುಸಿದು ಸಂಕರ್ಪ ಕಡಿತ, ಬಡಗಕಜೆಕಾರು ಗ್ರಾಮದ ಬಾಲಕೃಷ್ಣ ಎಂಬವರ ೭೦ ಅಡಿಕೆ ಮರ, ೫ ತೆಂಗಿನ ಮರಗಳಿಗೆ ಹಾನಿಯಾಗಿ ನಷ್ಟ ಸಂಭವಿಸಿದೆ.

ಶಾಸಕರ ಬೇಟಿ: ಮಳೆಯಿಂದ ಹಾನಿಗೀಡಾದ ಹಾಗೂ ಜಲಾವೃತಗೊಂಡ ಪ್ರದೇಶಗಳಿಗೆ ಶಾಸಕ ರಾಜೇಶ್ ನಾಯ್ಕ್ ಬೇಟಿ ನೀಡಿದರು.
ಕಾವಳಮೂಡೂರು ಗ್ರಾಮದಲ್ಲಿ ಭಾರಿ ಗಾಳಿಗೆ ಸೀತಾರಾಮ ಶೆಟ್ಟಿ ಐಚ್ಚಿಲರವರ ಮನೆಯ ಮೆಲ್ಛಾವಣಿ ಹಾರಿಹೋಗಿದ್ದು 200ಕ್ಕೂ ಹೆಚ್ಚು ಅಡಿಕೆ ಗಿಡಗಳು ನೆಲಕಚ್ಚಿದ್ದು ಇ‍ಲ್ಲಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಭಾರಿ ಮಳೆಗೆ ಭೂಕುಸಿತದಿಂದಾಗಿ ಅಲ್ಲಿಪಾದೆಯ ರಾಮ ಮೂಲ್ಯರ ಮನೆಗೆ ಹಾನಿಯಾಗಿದ್ದು ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು.
ಮಾಜಿ ಸಚಿವ ರೈ ಬೇಟಿ: ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಬೇಟಿ ನೀಡಿದರು.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...