Monday, February 2, 2026

ಬಸ್ ಚಾಲಕನಿಗೆ ಯುವಕರಿಂದ ಹಲ್ಲೆ

ಬಂಟ್ವಾಳ: ಕ್ಷುಲಕ ಕಾರಣಕ್ಕೆ ಕೆ.ಎಸ್ .ಆರ್.ಟಿ.ಸಿ.ಬಸ್ ಮತ್ತು ದ್ವಿಚಕ್ರವಾಹನ ಸವಾರ ಮಧ್ಯೆ ಮಾತಿನ ಚಕಮಕಿ ನಡೆದು ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಾಣಿ ಪೇಟೆಯಲ್ಲಿ ಶನಿವಾರ ಮಧ್ಯಾಹ್ನದ ವೇಳೆ ನಡೆಯಿತು.

ದ್ವಿಚಕ್ರ ವಾಹನ ಸವಾರರಿಗೆ ಸರಕಾರಿ ಬಸ್ ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ.

ಮಂಗಳೂರು ಕಡೆಯಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ಮಾಣಿ ಜಂಕ್ಸನ ಸಮೀಪಿಸುತ್ತಿದ್ದಂತೆ ದ್ವಿಚಕ್ರ ಸವಾರರಿಬ್ಬರಿಗೆ ಸೈಡ್ ಕೊಡದೆ ಮುಂದೆ ಹೋಗಲು ಬಿಟ್ಟಿ ಲ್ಲ ಎಂದು ಯುವಕರು ಬಸ್ ಚಾಲಕನಿಗೆ ಹಲ್ಲೆ ನಡೆಸಿದ್ದಾರೆ.
ಬಸ್ ಚಾಲಕ ಇಷ್ಟಾದರೂ ನಿಲ್ಲಿಸದೆ ಮುಂದೆ ಹೋದಾಗ ಬಸ್ ನ್ನು ಬೆನ್ನಟ್ಟಿಕೊಂಡು ಮಾಣಿ ಪೇಟೆಯಿಂದ ಸ್ವಲ್ಪ ಮುಂದೆ ಹೋಗಿ ಬಸ್ ಗೆ ದ್ವಿಚಕ್ರ ವಾಹನ ಅಡ್ಡ ಇಟ್ಟು ಚಾಲಕನಿಗೆ ಬಸ್ ನಿಂದ ಎಳೆದು ಹಾಕಿ ಥಳಿಸಿದ್ದಾರೆ.

ಯವಕರು ಕಲ್ಲಡ್ಕದಿಂದ ಒಂದು ಡಿಯೋ ವಾಹನದಲ್ಲಿ ಮೂರು ಮಂದಿ ಮತ್ತು ಬೈಕಿನಲ್ಲಿ ಎರಡು ಮಂದಿ ರೈಡ್ ಮಾಡಿಕೊಂಡು ಬರುತ್ತಿದ್ದಂತೆ ಮಾಣಿ ಸಮೀಪ ಇವರಿಗೆ ಸೈಡ್ ಕೊಟ್ಟಿಲ್ಲ ಎಂದು ಇವರು ಹಲ್ಲೆ ನಡೆಸಿ ದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಗಡಿಯಾರ ನಿವಾಸಿಗಳಾದ ಶಿಯಾಬುದ್ದೀನ್, ಮಹಮ್ಮದ್ ಇಲ್ಯಾಸ್, ಜಾಸೀರ್, ಬೋಳಂತರೂ ನಿವಾಸಿ ಮಹಮ್ಮದ್ ಶಾಫಿ ಅವರನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ಥಳಕ್ಕೆ ವಿಟ್ಲ ಎಸ್.ಐ.ಯಲ್ಲಪ್ಪ ಹಾಗೂ ಬಂಟ್ವಾಳ ಎ.ಎಸ್.ಪಿ.ವಿಶೇಷ ತಂಡದ ಉದಯ ರೈ ಹಾಗೂ ವಿವೇಕ್ ಬೇಟಿ ನೀಡಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...