Saturday, February 8, 2025

ವಿಟ್ಲ: ಹುಡುಗಿ ವಿಚಾರದಲ್ಲಿ ತಂಡದಿಂದ ವ್ಯಕ್ತಿಯ ಮೇಲೆ ಹಲ್ಲೆ

ವಿಟ್ಲ: ಹುಡುಗಿ ವಿಚಾರದಲ್ಲಿ ಬೇಕರಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ಮಾಡಿದ ಘಟನೆ ಶುಕ್ರವಾರ ರಾತ್ರಿ ವಿಟ್ಲ ಶಾಲಾ ರಸ್ತೆಯಲ್ಲಿ ನಡೆದಿದೆ.
ಯುವಕನೋರ್ವ ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಇನ್ನೊಬ್ಬ ವ್ಯಕ್ತಿ ಈತನ ಬಗ್ಗೆ ಹಗುರವಾಗಿ ಮಾತನಾಡಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ವಿಟ್ಲ ಪೇಟೆಯ ನಡು ರಸ್ತೆಯಲ್ಲಿ ಹಲ್ಲೆಗೆ ಮುಂದಾಗುವ ಹಂತಕ್ಕೆ ತಲುಪಿದೆ. ಪುತ್ತೂರು ಭಾಗದಿಂದ ತಂಡವೊಂದನ್ನು ಕರೆಸಿಕೊಂಡ ಯುವಕನೊಬ್ಬ, ವಿಟ್ಲ ಶಾಲಾ ರಸ್ತೆಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಹಲ್ಲೆಗೆ ಮಾಡಿದ್ದಾನೆ ಎನ್ನಲಾಗಿದೆ. ಸಾರ್ವಜನಿಕರು ತಂಡದಲ್ಲಿದ್ದ ಯುವಕನಿಗೆ ಹಲ್ಲೆ ನಡೆಸಿದ ಎಂದು ದೂರು ಕೊಡಲು ಮುಂದಾದಾಗ ನೈಜ ಘಟನೆ ಹೊರಬಿದ್ದಿದೆ. ಪುತ್ತೂರು ಭಾಗದಿಂದ ಕರೆಸಿಕೊಂಡ ತಂಡದಲ್ಲಿ ವಿಟ್ಲ ಭಾಗದ ಪಂಚಾಯಿತಿ ಸದಸ್ಯರ ಪುತ್ರನೂ ಸೇರಿದ್ದೆನ್ನೆನ್ನಲಾಗಿದ್ದು, ರಸ್ತೆಯಲ್ಲಿ ಗುಂಪು ಸೇರಿ ಗಲಾಟೆಗೆ ಮುಂದಾಗಿದ್ದರಿಂದ ಸ್ಥಳಕ್ಕೆ ಪೊಲೀಸರು ತೆರಳಿ ಗುಂಪನ್ನು ಚದುರಿಸಬೇಕಾದ ಅನಿವಾರ್ಯತೆಯೂ ಬಂದಿತ್ತು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...