Tuesday, January 27, 2026

ವಿಟ್ಲ: ಹುಡುಗಿ ವಿಚಾರದಲ್ಲಿ ತಂಡದಿಂದ ವ್ಯಕ್ತಿಯ ಮೇಲೆ ಹಲ್ಲೆ

ವಿಟ್ಲ: ಹುಡುಗಿ ವಿಚಾರದಲ್ಲಿ ಬೇಕರಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ಮಾಡಿದ ಘಟನೆ ಶುಕ್ರವಾರ ರಾತ್ರಿ ವಿಟ್ಲ ಶಾಲಾ ರಸ್ತೆಯಲ್ಲಿ ನಡೆದಿದೆ.
ಯುವಕನೋರ್ವ ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಇನ್ನೊಬ್ಬ ವ್ಯಕ್ತಿ ಈತನ ಬಗ್ಗೆ ಹಗುರವಾಗಿ ಮಾತನಾಡಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ವಿಟ್ಲ ಪೇಟೆಯ ನಡು ರಸ್ತೆಯಲ್ಲಿ ಹಲ್ಲೆಗೆ ಮುಂದಾಗುವ ಹಂತಕ್ಕೆ ತಲುಪಿದೆ. ಪುತ್ತೂರು ಭಾಗದಿಂದ ತಂಡವೊಂದನ್ನು ಕರೆಸಿಕೊಂಡ ಯುವಕನೊಬ್ಬ, ವಿಟ್ಲ ಶಾಲಾ ರಸ್ತೆಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಹಲ್ಲೆಗೆ ಮಾಡಿದ್ದಾನೆ ಎನ್ನಲಾಗಿದೆ. ಸಾರ್ವಜನಿಕರು ತಂಡದಲ್ಲಿದ್ದ ಯುವಕನಿಗೆ ಹಲ್ಲೆ ನಡೆಸಿದ ಎಂದು ದೂರು ಕೊಡಲು ಮುಂದಾದಾಗ ನೈಜ ಘಟನೆ ಹೊರಬಿದ್ದಿದೆ. ಪುತ್ತೂರು ಭಾಗದಿಂದ ಕರೆಸಿಕೊಂಡ ತಂಡದಲ್ಲಿ ವಿಟ್ಲ ಭಾಗದ ಪಂಚಾಯಿತಿ ಸದಸ್ಯರ ಪುತ್ರನೂ ಸೇರಿದ್ದೆನ್ನೆನ್ನಲಾಗಿದ್ದು, ರಸ್ತೆಯಲ್ಲಿ ಗುಂಪು ಸೇರಿ ಗಲಾಟೆಗೆ ಮುಂದಾಗಿದ್ದರಿಂದ ಸ್ಥಳಕ್ಕೆ ಪೊಲೀಸರು ತೆರಳಿ ಗುಂಪನ್ನು ಚದುರಿಸಬೇಕಾದ ಅನಿವಾರ್ಯತೆಯೂ ಬಂದಿತ್ತು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...