Thursday, June 26, 2025

ಪೊಲೀಸ್ ಮೇಲೆ ಹಲ್ಲೆ ನಡೆಸಿದವರಲ್ಲಿ ‘ಕಾರ್ಕಾನ ಗ್ಯಾಂಗ್’ ಕೈವಾಡವೂ ಇದೆ: ಎನ್‌. ಶಶಿಕುಮಾರ್

ಮಂಗಳೂರು : ಸಾರ್ವಜನಿಕರ ಆಸ್ತಿ-ಪಾಸ್ತಿ, ಮಾನ-ಪ್ರಾಣ ರಕ್ಷಿಸುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿರುತ್ತದೆ‌. ಆದ್ದರಿಂದ ಕಿಡಿಗೇಡಿಗಳು ಯಾರೂ ಕೂಡ ಪೊಲೀಸ್ ಮೇಲೆ ದಾಳಿ ನಡೆಸುವ ದುಃಸಾಹಸಕ್ಕೆ ಕೈಹಾಕಬಾರದು.‌ ಪೊಲೀಸ್ ಸಿಬ್ಬಂದಿಯಿಂದ ದುರ್ವರ್ತನೆ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ..

ಮಂಗಳೂರು ನಗರದಲ್ಲಿ ಪೊಲೀಸ್ ಮೇಲೆ ಹಲ್ಲೆ ನಡೆಸಿರುವ ತಂಡದಲ್ಲಿ ‘ಮಾಯಾಗ್ಯಾಂಗ್’ ಅಲ್ಲದೆ ‘ಕಾರ್ಕಾನ ಗ್ಯಾಂಗ್’ನ ಕೈವಾಡ ಕೂಡ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಗುಂಪಿನ ಮೂವರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಕಾನ ಗ್ಯಾಂಗ್​ನ ಸದಸ್ಯರು ಮಾಯಾಗ್ಯಾಂಗ್‌ನ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಮಾಹಿತಿ ನೀಡಿದರು. ಪೊಲೀಸ್ ಆಯುಕ್ತ ಎನ್.ಶಶಿಕುಮಾರ

ಪ್ರಕರಣದ ಹಿನ್ನೆಲೆ : ಬಂದರು ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಗಣೇಶ್ ಕಾಮತ್ ಅವರ ಮೇಲೆ ಡಿ.16ರಂದು ನಗರದ ನ್ಯೂಚಿತ್ರಾ ಟಾಕೀಸ್ ಬಳಿ ಅಪ್ರಾಪ್ತ ಬಾಲಕನೋರ್ವ ದಾಳಿ ನಡೆಸಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ ಇಬ್ಬರನ್ನು ವಶಪಡಿಸಿಕೊಂಡು ತನಿಖೆ ನಡೆಸಿದ ಸಂದರ್ಭದಲ್ಲಿ ‘ಮಾಯಾ ಗ್ಯಾಂಗ್’ ಎಂಬ ತಂಡದ ಆರು ಮಂದಿ ಈ ಕೃತ್ಯದಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ದೊರಕಿತ್ತು.‌

ಈಗ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ಕಾರ್ಕಾನ ಗ್ಯಾಂಗ್ ಸದಸ್ಯರೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಪ್ರಕರಣದಲ್ಲಿ ಮೊದಲು ಬಂಧಿತನಾದ ನವಾಝ್ ಹಾಗೂ ಮೊನ್ನೆ ಬಂಧಿತನಾದ ಫಾಯಿಝ್ ಎಂಬ ಇಬ್ಬರಿಂದ ಈ ಎರಡೂ ಗ್ಯಾಂಗ್​ಗಳು ಒಂದಾಗಿ ಈ ದುಷ್ಕೃತ್ಯ ನಡೆಸಲು ಸಂಚು ಹೂಡಿವೆ. ಒಬ್ಬೊಬ್ಬರೇ ಇರುವ ಪೊಲೀಸರ ಮೇಲೆ ದಾಳಿ ನಡೆಸುವ ಬಗ್ಗೆ ಸಂಚು ರೂಪಿಸಿದ್ದರು. ಇಂತಹ ಮೂರು ನಾಲ್ಕು ಕಡೆಗಳಲ್ಲಿ ಪೊಲೀಸ್ ಮೇಲೆ ದಾಳಿ ನಡೆಸುವ ಬಗ್ಗೆಯೂ ಸಂಚು ರೂಪಿಸಿದ್ದರೆಂದು ತನಿಖೆಯ ವೇಳೆ ಸ್ಪಷ್ಟವಾಗಿದೆ ಎಂದರು.

ಆರೋಪಿಗಳ ಬಳಿ ಇನ್ನೂ ಹಲವಾರು ತೀಕ್ಷ್ಣವಾದ ಆಯುಧಗಳು ಇದ್ದವು ಎಂಬ ಮಾಹಿತಿಯೂ ನಮಗೆ ದೊರೆತಿದೆ. ಬಂಧಿತರಾದಾಗ ಏನು ಮಾಡಬೇಕು, ಜೈಲಿಗೆ ಹೋದಾಗ ಯಾವ ರೀತಿ ಇರಬೇಕು, ಯಾವ ಕೊಠಡಿಯಲ್ಲಿ ಇರಬೇಕು‌ ಎಂಬ ವಿಚಾರಗಳ ಬಗ್ಗೆಯೂ ಹಿಂದೆಯೇ ಅವರ ನಡುವೆ ಚರ್ಚೆಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿವೆ. ‌

ಈ ಹಿನ್ನೆಲೆಯಾಗಿರಿಸಿಕೊಂಡು ತನಿಖೆ ನಡೆಸಲಾಗುತ್ತದೆ. ‌ಸಾರ್ವಜನಿಕರ ಆಸ್ತಿ-ಪಾಸ್ತಿ, ಮಾನ-ಪ್ರಾಣ ರಕ್ಷಿಸುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿರುತ್ತದೆ‌. ಆದ್ದರಿಂದ ಕಿಡಿಗೇಡಿಗಳು ಯಾರೂ ಕೂಡ ಪೊಲೀಸ್ ಮೇಲೆ ದಾಳಿ ನಡೆಸುವ ದುಃಸಾಹಸಕ್ಕೆ ಕೈಹಾಕಬಾರದು.‌ ಪೊಲೀಸ್ ಸಿಬ್ಬಂದಿಯಿಂದ ದುರ್ವರ್ತನೆ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸದ್ಯಕ್ಕೆ ಈ ಪ್ರಕರಣವನ್ನು ಸಿಐಡಿ ಅಥವಾ ಇನ್ನಿತರ ತನಿಖಾ ತಂಡದ ಮೂಲಕ ತನಿಖೆ ನಡೆಸುವ ಚಿಂತನೆಯಿಲ್ಲ. ಆದರೆ, ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯ ಅಗತ್ಯವಿದೆ. ಆದ್ದರಿಂದ ವಿಶೇಷ ತನಿಖಾ ತಂಡಕ್ಕೆ ಪ್ರಕರಣದ ತನಿಖೆ ನಡೆಸುವ ಅಗತ್ಯವಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಂತಹ ಅವಶ್ಯಕತೆ ಕಂಡು ಬಂದಲ್ಲಿ ಮೇಲಾಧಿಕಾರಿಗಳೇ ನಮಗೆ ಸೂಚನೆ ನೀಡುತ್ತಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...