Thursday, June 26, 2025

ಯುವಕನಿಗೆ ಮಾರಣಾಂತಿಕ ಹಲ್ಲೆ

ಬಂಟ್ವಾಳ: ಯುವಕನೊರ್ವ ರಸ್ತೆ ಬದಿಯಲ್ಲಿ ಬೈಕಿ ನಿಲ್ಲಿಸಿ ಮೊಬೈಲ್ ನಲ್ಲಿ ಮಾತಾನಾಡುವ ವೇಳೆ ಮೂವರು ಸೇರಿ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಲೊರೆಟ್ಟೊ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.

 

ನಿತಿನ್ ಪೂಜಾರಿ ಎಂಬವರು ಮಾರಣಾಂತಿಕ ವಾಗಿ ಹಲ್ಲೆಗೊಳಗಾಗಿ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತಿನ್ ಪೂಜಾರಿ ಮೂಲತಃ ಲೊರೆಟ್ಟೊ ಸಮೀಪದ ಪೆದಮಲೆಯಲ್ಲಿ ವಾಸವಾಗಿದ್ದರು.
ಆದರೆ ಕೆಲವೊಂದು‌ ಕಾರಣದಿಂದ ಇವರು ಮಾರ್ನಬೈಲು ಸಮೀಪದ ಬೊಳ್ಳಾಯಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ನಿತಿನ್ ವಿದೇಶದಲ್ಲಿ ಉದ್ಯೋಗ ದಲ್ಲಿದ್ದು ಮೂರು ತಿಂಗಳ ಹಿಂದೆ ಊರಿಗೆ ಆಗಮಿಸಿದ್ದರು.

ಪೆದಮಲೆಯಲ್ಲಿರುವ ಜಾಗದಲ್ಲಿ ಮನೆ ನಿರ್ಮಾಣ ಹಾಗೂ ಬೊರೆವೆಲ್ ಕೊರೆಸುವ ಯೋಚನೆ ಮಾಡಿದ್ದು , ಈ ಕಾರಣಕ್ಕಾಗಿ ಇವರು ಸಂಜೆಯ ವೇಳೆ ತನ್ನ ಬುಲೆಟ್ ಬೈಕ್ ನಲ್ಲಿ ಪೆದಮಲೆ ಜಾಗದ ಕಡೆಗೆ ಹೋಗಿ ಬಳಿಕ ವಾಪಾಸು ಬರುವ ವೇಳೆ ಲೊರೆಟ್ಟೊ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ನಿಂತು ಕೊಂಡು ವಿದೇಶದಲ್ಲಿರುವ ಅಣ್ಣನ ಜೊತೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿರುವಾಗ ವಾಸು ಪೂಜಾರಿ ಅವರು ಅವ್ಯಾಚ್ಚ ಶಬ್ದಗಳಿಂದ ಬೈದು ಅಲ್ಲಿಂದ ಹೋಗುವಂತೆ ಹೇಳಿದರು. ‌
ಅಲ್ಲಿಂದ ಕೆಳಭಾಗ ಕ್ಕೆ ಬಂದು ಬೈಕ್ ನಿಲ್ಲಿಸಿ ಮತ್ತೆ ಅಣ್ಣನ ಜೊತೆ ಮಾತನಾಡುವ ವೇಳೆ ವಾಸು ಪೂಜಾರಿಯವರ ಇಬ್ಬರು ಮಕ್ಕಳಾದ ರಾಕೇಶ್ ಮತ್ತು ಚೇತನ್ ಅವರು ಆಕ್ಟೀವ್ ಹೊಂಡಾದಲ್ಲಿ ಬಂದು ಅದರಲ್ಲಿದ್ದ ರಾಡ್ ತೆಗೆದು ನಿನ್ನನ್ನು ಕೊಲ್ಲತ್ತೇವೆ ಎಂದು ಹೇಳಿ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದಾಗ ಜೀವ ಉಳಿಸಲು ರಕ್ತದ ಜೊತೆಯಲ್ಲಿ ಒಡಿ ಬಂದಿದ್ದೇನೆ ಎಂದು ನಿತಿನ್ ತಿಳಿಸಿದ್ದಾರೆ.

ಕಿಸೆಯಲ್ಲಿ ಅರುವತ್ತು ಸಾವಿರ ರೂ. ನಗದು ಹಣವಿದ್ದು ಅದನ್ನು ಅವರು ದೋಚಿದ್ದಾರೆ ಎಂದು ನಿತಿನ್ ತಿಳಿಸಿದ್ದಾರೆ. ಅಲ್ಲದೆ ಇವರ ಬುಲೆಟ್ ಬೈಕ್ ನ್ನು ಹೊಡೆದು ಹಾನಿಗೊಳಿಸಿದ್ದಾರೆ ಎಂದು ಅವರು ಠಾಣೆ ಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ನಿತಿನ್ ಕೂಡಾ ನಮಗೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ ರಾಕೇಶ್ ಚೇತನ್ , ವಾಸು ಪೂಜಾರಿ ಅವರು ಸಮುದಾಯ ಆಸ್ಪತ್ರೆ ಯಲ್ಲಿ ದಾಖಲಾಗಿದ್ದಾರೆ.‌
ಇವರ ನಡುವಿನ ವೈಯಕ್ತಿಕ ವಿಚಾರಕ್ಕೆ ಗಲಾಟೆ ನಡೆದಿರಬಹುದು ಎಂದು ಪೋಲೀಸರು ತಿಳಿಸಿದ್ದಾರೆ.
ಆಸ್ಪತ್ರೆ ಗೆ ಬಂಟ್ವಾಳ ನಗರ ಠಾಣಾ ಎಸ್. ಐ. ಚಂದ್ರಶೇಖರ್ ಬೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...