Monday, February 10, 2025

ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಹೆಗ್ಗಡೆ ಸಂತಾಪ:

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಆತ್ಮೀಯರಾದ ಶ್ರೀ ಕೆ.ಅಮರನಾಥ ಶೆಟ್ಟಿ ಅವರ ನಿಧನದ ವಾರ್ತೆ ಕೇಳಿ, ಆತ್ಮೀಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರು ನೇರ ನಡೆ-ನುಡಿಯ ಹಾಗೂ ಸತ್ಯ, ನ್ಯಾಯಕ್ಕಾಗಿ ಶಿಸ್ತು ಪಾಲನೆಯ ಅಪೂರ್ವ ವ್ಯಕ್ತಿತ್ವವನ್ನು ಹೊಂದಿದವರು ಎಂದು ಡಾ.ಡಿ.ವಿರೇಂದ್ರ ಹೆಗ್ದೆ ಸಂತಾಪ ಸೂಚಿಸಿದರು.
ಮೂಡಬಿದ್ರೆಯಲ್ಲಿ ಸಹಕಾರಿ ರಂಗವನ್ನು ಅಖಂಡವಾಗಿ ಮುನ್ನಡೆಸಿ ಅನೇಕ ಜನ ಸ್ನೇಹಿ ಕಾರ್ಯಕ್ರಮಗಳನ್ನು ಅವರು ಯಶಸ್ವಿಯಾಗಿ ರೂಪಿಸಿದರು. ರಾಜಕೀಯ ಕ್ಷೇತ್ರದಲ್ಲಿ ಅವಿರತವಾಗಿ ದುಡಿದು, ಕೆಲವೇ ಕಾಲ ಸಚಿವ ಸ್ಥಾನದಲ್ಲಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗ್ಡೆ ಅವರ ಒಮ್ಮೆ ಮೂಡಬಿದ್ರೆಗೆ ಬಂದಿದ್ದಾಗ, ಕ್ರಿಕೆಟ್‌ನಲ್ಲಿ ಟಿ-20 ಪಂದ್ಯದಲ್ಲಿ ಆಡಿದಂತೆ ವೇಗವಾಗಿ ಆಟ ಪ್ರದರ್ಶಿಸಿ ಅಮರನಾಥ ಶೆಟ್ಟಿ ಅವರ ಹಿಂದೆ ಬಂದರು. ಅವರಂತಹ ಸಜ್ಜನರಿಗೆ ಇನ್ನೊಮ್ಮೆ ಮಂತ್ರಿ ಸ್ಥಾನ ಕೊಡಿ ಎಂದು ಮುಖ್ಯಮಂತ್ರಿ ಅವರಲ್ಲಿ ನಾನು ಕೇಳಿಕೊಂಡಿದ್ದೆ. ರಾಜಕೀಯ ಅಧಿಕಾರ, ಸ್ಥಾನವಿಲ್ಲದಿದ್ದರೂ ಅವರು ಸದಾ ಜನಪರ ಕಾರ್ಯಗಳ ಮೂಲಕ ಜನತೆಗೆ ಆತ್ಮೀಯರಾಗಿದ್ದರು. ಅವರ ಆದರ್ಶ ಸದಾ ಜಾಗೃತವಾಗಿರಲಿ ಎಂದು ಆಶಿಸುತ್ತಾ, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ  ಎಂದು ಡಾ.ಡಿ.ವಿರೇಂದ್ರ ಹೆಗ್ದೆ ಹೇಳಿದರು.

 

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...