Friday, June 27, 2025

ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಹೆಗ್ಗಡೆ ಸಂತಾಪ:

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಆತ್ಮೀಯರಾದ ಶ್ರೀ ಕೆ.ಅಮರನಾಥ ಶೆಟ್ಟಿ ಅವರ ನಿಧನದ ವಾರ್ತೆ ಕೇಳಿ, ಆತ್ಮೀಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರು ನೇರ ನಡೆ-ನುಡಿಯ ಹಾಗೂ ಸತ್ಯ, ನ್ಯಾಯಕ್ಕಾಗಿ ಶಿಸ್ತು ಪಾಲನೆಯ ಅಪೂರ್ವ ವ್ಯಕ್ತಿತ್ವವನ್ನು ಹೊಂದಿದವರು ಎಂದು ಡಾ.ಡಿ.ವಿರೇಂದ್ರ ಹೆಗ್ದೆ ಸಂತಾಪ ಸೂಚಿಸಿದರು.
ಮೂಡಬಿದ್ರೆಯಲ್ಲಿ ಸಹಕಾರಿ ರಂಗವನ್ನು ಅಖಂಡವಾಗಿ ಮುನ್ನಡೆಸಿ ಅನೇಕ ಜನ ಸ್ನೇಹಿ ಕಾರ್ಯಕ್ರಮಗಳನ್ನು ಅವರು ಯಶಸ್ವಿಯಾಗಿ ರೂಪಿಸಿದರು. ರಾಜಕೀಯ ಕ್ಷೇತ್ರದಲ್ಲಿ ಅವಿರತವಾಗಿ ದುಡಿದು, ಕೆಲವೇ ಕಾಲ ಸಚಿವ ಸ್ಥಾನದಲ್ಲಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗ್ಡೆ ಅವರ ಒಮ್ಮೆ ಮೂಡಬಿದ್ರೆಗೆ ಬಂದಿದ್ದಾಗ, ಕ್ರಿಕೆಟ್‌ನಲ್ಲಿ ಟಿ-20 ಪಂದ್ಯದಲ್ಲಿ ಆಡಿದಂತೆ ವೇಗವಾಗಿ ಆಟ ಪ್ರದರ್ಶಿಸಿ ಅಮರನಾಥ ಶೆಟ್ಟಿ ಅವರ ಹಿಂದೆ ಬಂದರು. ಅವರಂತಹ ಸಜ್ಜನರಿಗೆ ಇನ್ನೊಮ್ಮೆ ಮಂತ್ರಿ ಸ್ಥಾನ ಕೊಡಿ ಎಂದು ಮುಖ್ಯಮಂತ್ರಿ ಅವರಲ್ಲಿ ನಾನು ಕೇಳಿಕೊಂಡಿದ್ದೆ. ರಾಜಕೀಯ ಅಧಿಕಾರ, ಸ್ಥಾನವಿಲ್ಲದಿದ್ದರೂ ಅವರು ಸದಾ ಜನಪರ ಕಾರ್ಯಗಳ ಮೂಲಕ ಜನತೆಗೆ ಆತ್ಮೀಯರಾಗಿದ್ದರು. ಅವರ ಆದರ್ಶ ಸದಾ ಜಾಗೃತವಾಗಿರಲಿ ಎಂದು ಆಶಿಸುತ್ತಾ, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ  ಎಂದು ಡಾ.ಡಿ.ವಿರೇಂದ್ರ ಹೆಗ್ದೆ ಹೇಳಿದರು.

 

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...