Saturday, July 12, 2025

ಶೀಘ್ರದಲ್ಲೇ ಬಿಡುಗಡೆ ಗೊಳ್ಳುವ ‘ಡಾ| ಶಿವರಾಮ ಭಂಡಾರಿ ಜೀವನ ಚರಿತ್ರೆ’ ಕೃತಿಗೆ ಶುಭಾರೈಕೆ ಯಾಚಿಸಿ ಡಾ| ವೀರೇಂದ್ರ ಹೆಗ್ಗಡೆ ಅವರಿಗೆ ಸಾಂಪ್ರದಾಯಿಕ ಮನವಿ

ಮುಂಬಯಿ,ಎ.೦೨: ಹೇರ್ ಸ್ಟೈಲೋ ಮೂಲಕ ಅಂತರಾಷ್ಟ್ರೀಯ ಹಿರಿಮೆಗೆ ಪಾತ್ರರಾಗಿರುವ ಮುಂಬಯಿನ ಖ್ಯಾತ ಕೇಶ ವಿನ್ಯಾಸಕಾರ, ಶಿವಾ’ಸ್ ಹೇರ್ ಡಿಝೈನರ್‍ಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಡಾ| ಶಿವರಾಮ ಕೃಷ್ಣ ಭಂಡಾರಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕಳೆದ ಶುಕ್ರವಾರ (ಮಾ.೨೯) ಭೇಟಿಗೈದು ಶೀಘ್ರದಲ್ಲೇ ಬಿಡುಗಡೆ ಗೊಳ್ಳುವ ತನ್ನ ಜೀವನ ಚರಿತ್ರೆ ಕೃತಿಗೆ ಶುಭಾರೈಕೆ ಯಾಚಿಸಿ ಸಾಂಪ್ರದಾಯಿಕವಾಗಿ ಬಿನ್ನಹ ಗೈದರು.

ಕಾರ್ಕಳ ಅತ್ತೂರು ಗ್ರಾಮದ ಹಳ್ಳಿ ಹುಡುಗನೋರ್ವ ತನ್ನ ಸಮುದಾಯದ ಕುಲಕಸಬು ಕೇಶ ಛೇದನವನ್ನೇ ಜೀವನ ಉದ್ಯಮವಾಗಿಸಿ ವೃತ್ತಿನಿಷ್ಠೆಯಿಂದಲೇ ಗೌರವ ಡಾಕ್ಟರೇಟ್‌ಗೆ ಭಾಜನರಾಗಿ ಸದ್ಯ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿರುವ ಶಿವರಾಮ ಭಂಡಾರಿ ಅವರ ಸಾಧನೆಗೆ ಡಾ| ಹೆಗ್ಗಡೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಪ್ರೊ| ಎಂ.ಪಿ ಶ್ರೀನಾಥ್ ಅರಸಿನಮಕ್ಕಿ, ಪತ್ರಕರ್ತ ಆರೀಫ್ ಕಲಕಟ್ಟಾ ಉಪಸ್ಥಿತರಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...