Thursday, January 29, 2026

ಹಿಂದಿ ದಿವಸ್ ಅಂಗವಾಗಿ ಆನ್ ಲೈನ್ ನಲ್ಲಿ ಹಿಂದಿ ಭಾಷಣ ಸ್ಪರ್ಧೆ

ಸುಳ್ಯ : ಹಿಂದಿ ದಿವಸ್ ಅಂಗವಾಗಿ ಏರ್ಪಡಿಸಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಆನ್ ಲೈನ್ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೊಮಿನಾ ಕಾಲೇಜಿನ ವಿದ್ಯಾರ್ಥಿನಿ ಸ್ನಿಗ್ಧ ಎಮ್.ಜೆ. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಡಾ. ದಯಾನಂದ ಪೈ, ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥ ಬೀದಿ, ಮಂಗಳೂರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ವತಿಯಿಂದ 2020 ರ ಹಿಂದಿ ದಿನಾಚರಣೆ ಪ್ರಯುಕ್ತ ಇದೇ ಮೊದಲ ಬಾರಿಗೆ ಆನ್ ಲೈನ್ ಹಿಂದಿ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಸೆ.7 ರಿಂದ 12 ರ ಅವಧಿಯಲ್ಲಿ ವಿದ್ಯಾರ್ಥಿಗಳು ಮನೆಯಲ್ಲೇ ಸಿದ್ಧಪಡಿಸಿದ ಭಾಷಣದ ವಿಡಿಯೋವನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ದಕ್ಷಿಣ ಕನ್ನಡ, ಉಡುಪಿ ಹಾಗೂ ಮಡಿಕೇರಿ ಜಿಲ್ಲೆಗಳ ಸುಮಾರು 40 ಕಾಲೇಜುಗಳಿ‌ಂದ ಸ್ಪರ್ಧಿಗಳು ಭಾಗವಹಿಸಿದ್ದು, ತೀರ್ಪುಗಾರರ ತಂಡ ಐವರು ವಿಜೇತರನ್ನು ಆಯ್ಕೆ ಮಾಡಿದೆ.

ಸೆ.14 ರ ಹಿಂದಿ ದಿನಾಚರಣೆಯಂದೇ ಫಲಿತಾಂಶ ಪ್ರಕಟಿಸಲಾಗಿದ್ದು, ಪುತ್ತೂರಿನ ಸಂತ ಫಿಲೊಮಿನಾ ಕಾಲೇಜಿನ ವಿದ್ಯಾರ್ಥಿನಿ ಸ್ನಿಗ್ಧ ಎಮ್.ಜೆ. ಪ್ರಥಮ, ಉಡುಪಿಯ ತ್ರಿಶಾ ವಿದ್ಯಾ ಕಾಲೇಜಿನ ಶೃತಿ ಶ್ರೀಕಾಂತ ಶಾನಭಾಗ್ ದ್ವಿತೀಯ ಬಹುಮಾನ ಪಡೆದರು. ತೃತೀಯ ಬಹುಮಾನವನ್ನು ಮೂವರು ವಿದ್ಯಾರ್ಥಿಗಳು ಹಂಚಿಕೊಂಡಿದ್ದು, ಮಂಗಳೂರಿನ ಕೆನರಾ ಕಾಲೇಜಿನ ವಿದ್ಯಾರ್ಥಿನಿ ಪವಿತ್ರ ನಾಯಕ್, ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಲ್ಲವಿ ಕೆ. ಹಾಗೂ ಮಂಗಳೂರು ರಥಬೀದಿಯ ಡಾ. ದಯಾನಂದ ಪೈ, ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿಸಾರ್ ಅಹಮದ್ ಆಯ್ಕೆಯಾದರು. ಬಹುಮಾನ ನಗದು ಹಾಗೂ ಆನ್ ಲೈನ್ ಪ್ರಮಾಣ ಪತ್ರವನ್ನು ಒಳಗೊಂಡಿತ್ತು. ಮಂಗಳೂರು ಕಾರ್ ಸ್ಟ್ರೀಟ್ ಕಾಲೇಜಿನ ಡಾ.ಶಿವರಾಮ ಪಿ ಮತ್ತು ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಾಮಕೃಷ್ಣ ಕೆ.ಎಸ್. ರವರು ಸ್ಪರ್ಧೆಯನ್ನು ಸಂಯೋಜಿಸಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...