Tuesday, February 11, 2025

ಹಿಂದೂಸ್ತಾನ್ ಪೆಟ್ರೋಲಿಯಂ ಕಂಪೆನಿ ನೌಕರರ ಪ್ರತಿಭಟನೆ: ಶಾಸಕ ರಾಜೇಶ್ ನಾಯ್ಕ್ ಬೇಟಿ, ಸ್ಥಳದಲ್ಲೇ ಸಮಸ್ಯೆ ಪರಿಹಾರ

ಬಂಟ್ವಾಳ: ಕಂಪೆನಿಯೊಂದು ದಿನಗೂಲಿ ನೌಕರರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎಂಬ ಕಾರಣಕ್ಕೆ ಮತ್ತು ವಾಪಸು ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕಂಪೆನಿಯ ಗೇಟಿನ ಮುಂದೆ ಕಾರ್ಮಿಕ ರು ಪ್ರತಿಭಟನೆ

ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬೇಟಿ ನೀಡಿ ಸ್ಥಳ ಕ್ಕೆ ಕಂಪೆನಿಯ ಅಧಿಕಾರಿಗಳನ್ನು ಕರೆಯಿಸಿ ಮಾತುಕತೆ ನಡೆಸಿ ಸ್ಥಳದಲ್ಲೇ  ಕೆಲಸಗಾರರನ್ನು ಮರುಸೇರ್ಪಡೆಗೊಳಸಿದ ಘಟನೆ ಬೆಳಿಗ್ಗೆ ಗುಡ್ಡೆಯಂಗಡಿ ಸರಪಾಡಿ ಗ್ರಾಮ ಎಂಬಲ್ಲಿ ನಡೆದಿದೆ.

ಘಟನೆಯ ವಿವರ:
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್‌ ಲಿ. ಗ್ಯಾಸ್ ಪೈಪ್ ಲೈನ್ ನ ಗುಡ್ಡೆಯಂಗಡಿಯ ,ಮಳಲಿ, ಹಾಗೂ ಕೈಕಂಬದ ಕಂದಾವರ ಘಟಕದ ಸ್ಥಳೀಯ ನಿವಾಸಿಗಳಾದ 11 ನೌಕರರನ್ನು ಯಾವುದೇ ಪೂರ್ವ ಮಾಹಿತಿ ನೀಡದೆ  ಸಂಸ್ಥೆ ಕೆಲಸದಿಂದ ತೆಗೆದು ಹಾಕಿತ್ತು.
 ಕೆಲಸ ಕಳೆದುಕೊಂಡ ಕಾರ್ಮಿಕರು ಇಂದು ಬೆಳಿಗ್ಗೆ ಗುಡ್ಡೆಯಂಗಡಿ ಕಂಪೆನಿಯ ಗೇಟಿನ ಮುಂದೆ ಪ್ರತಿಭಟನೆ ನಡೆಸಿದರು.
ಗುತ್ತಿಗೆ ಆಧಾರದ ಮೇಲೆ 11 ಮಂದಿ ಕಾರ್ಮಿಕರು ಕಳೆದ ಆರು ವರ್ಷಗಳಿಂದ ‌ಕಾವಲುಗಾರ ಕೆಲಸ ಮಾಡುತ್ತಿದ್ದರು.
 ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಲ್ಲಿ  ಕೆಲಸ ಕಳೆದುಕೊಂಡವರು ತಮ್ಮ ಅಳಲನ್ನು ತೋಡಿಕೊಂಡಿದ್ದು ಇದಕ್ಕೆ ಸ್ಪಂಧಿಸಿದ ಶಾಸಕರು ಸಂಸ್ಥೆಯ ಆಡಳಿತ ವರ್ಗವನ್ನು ಪ್ರತಿಭಟನಾ ಸ್ಥಳಕ್ಕೆ ಕರೆಯಿಸಿ ಮೂಲಭೂತ ವಾದ ಸೌಕರ್ಯಗಳು ಇಲ್ಲದ ಸಮಯದಲ್ಲಿ ಅಂದರೆ ಕಂಪೆನಿ‌ಆರಂಭವಾಗುವ ಕಷ್ಟದ ಕಾಲದಲ್ಲಿ ಇಲ್ಲಿನ ಸ್ಥಳೀಯ ಕಾರ್ಮಿಕರು ಕೆಲಸ ನಿರ್ವಹಣೆ ಮಾಡಿದ್ದಾರೆ. ಆದರೆ ಕಂಪೆನಿ ಸಮರ್ಥವಾಗಿ ಕಾರ್ಯ ನಡೆಸಿಕೊಂಡು ಹೋಗುವ ಈ ಸಂದರ್ಭದಲ್ಲಿ ಇಲ್ಲಿನ ಕಾರ್ಮಿಕರ ಮೇಲೆ ಯಾವುದೇ ದೂರುಗಳಿಲ್ಲಿದೆ ಜೊತೆಗೆ ಪೂರ್ವ ಮಾಹಿತಿ ನೀಡದೆ ಏಕಾಏಕಿ ಕೆಲಸದಿಂದ ವಜಾಗೊಳಿಸುವುದು ಸರಿಯಲ್ಲ ಎಂದು ಅವರು ಅಧಿಕಾರಿಗಳಲ್ಲಿ ಹೇಳಿದರು.
ನೀವು ಇನ್ನು ಎಷ್ಟು ಜನ ಕಾರ್ಮಿಕರು ಬೇಕಾದರೂ ತೆಗೆದುಕೊಳ್ಳಿ ಆದರೆ ಆರಂಭದಿಂದ ಕಂಪೆನಿಯ ಏಳಿಗೆಗೆ ದುಡಿದ ಸ್ಥಳೀಯ ಕಾರ್ಮಿಕ ರಿಗೆ ಅನ್ಯಾಯ ಮಾತ್ರ ಮಾಡಬೇಡಿ ಎಂದರು.
ಅಲ್ಲದೆ ಈ ಕಂಪೆನಿ ನಿರ್ಮಿಸಲು ಜಾಗ ನೀಡಿದವರು ಮತ್ತು ಬಡ ವರ್ಗದ ಕಾರ್ಮಿಕರು ಮಾತ್ರ ಕಂಪನಿಯ ಲ್ಲಿ ಕೆಲಸ ಮಾಡುತ್ತಿರುವುದು . ಹಾಗಾಗಿ ಇವರ ಬಗ್ಗೆ ಮಾನವೀಯತೆ ಕೂಡ ಕಂಪೆನಿ ಗೆ ಇರಲಿ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿದರು. ‌
 ಅಧಿಕಾರಿಗಳಿಗೆ ಆಗಿರುವ ತಪ್ಪನ್ನು ಸರಿಪಡಿಸಿ ತಕ್ಷಣವೇ ಕೆಲಸ ಕಳೆದುಕೊಂಡಿರುವವರಿಗೆ ಕೆಲಸದಲ್ಲಿ ಮುಂದುವರಿಸುವಂತೆ ಸಂಸ್ಥೆಗೆ ಸೂಚಿಸಿದರು.
ಸ್ಥಳಕ್ಕೆ ಅಗಮಿಸಿದ ಕಂಪನಿಯ ಜಿ.ಎಮ್ ರಾಜಶೇಖರನ್ ಅವರು ಈ ಸಂದರ್ಭದಲ್ಲಿ ಮಾತನಾಡಿ ಕಂಪನಿಯ ಮೇಲಾಧಿಕಾರಿಗಳ ಜೊತೆ ವಿಷಯ ತಿಳಿಸಿ ಮುಂದಿನಕ್ರಮಗಳ ಬಗ್ಗೆ ತಿಳಿಸುತ್ತೇವೆ..ಅ ವರೆಗೆ ಇವರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡುತ್ತೇವೆ ಎಂದರು.
ಎಲ್ಲಾ ಕಂಪೆನಿಯಲ್ಲೂ ಮಾಜಿ ಸೈನಿಕರನ್ನು ಕೆಲಸಕ್ಕೆ ಸೇರಿಸುವಂತೆ ಕಂಪೆನಿಗೆ ಸರಕಾರದ ಆದೇಶವಿದೆ ಅ ನಿಟ್ಟಿನಲ್ಲಿ ಕ್ರಮತೆಗೆದುಕೊಂಡಿದ್ದೇವೆ.
ಮುಂದಿನ ಆದೇಶದವರಗೆ ಇವರು ಕೆಲಸಕ್ಕೆ ಹಾಜರಾಗುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕಂಪನಿಯ ಡಿ.ಜಿಎಮ್.ಬಿಶ್ವಾಸ್ ಕುಮಾರ್ ಶರ್ಮ, ಮಾನ್ಯೇಜರ್ ಕಿರಣ್ ಕುಮಾರ್ , ಪ್ರಮುಖ ರಾದ ದೇವಪ್ಪ ಪೂಜಾರಿ,  ಚಂದ್ರಹಾಶ  ಶೆಟ್ಟಿ ನಾರ್ಲ, ಭುಜಂಗ ಕುಲಾಲ್, ಉಮೇಶ್ ಅರಳ, ಉಮೇಶ್ ಶೆಟ್ಟಿ, ನಂದರಾಮ್ ರೈ, ವಸಂತ ಅಣ್ಣಳಿಕೆ, ಗಂಜಿಮಠ ಗ್ರಾ.ಪಂ. ಸದಸ್ಯ ದುರ್ಗಾದಾಸ ಶೆಟ್ಟಿ, ಸಂದೀಪ್ ಶೆಟ್ಟಿ ಮೊಗರು, ಪವನ್ ಕುಮಾರ್ ಶೆಟ್ಟಿ, ಮಂಜುನಾಥ್ ಶೆಟ್ಟಿ ಗಾರ್ ,  ಪುರುಷೋತ್ತಮ ಶೆಟ್ಟಿ ವಾಮದಪದವು, ಬಾಸ್ಕರ್ ಕುಲಾಲ್ ಮೊಗರು , ರಮೇಶ್ ಭಟ್ಟಾಜೆ , ರಂಜನ್ ಶೆಟ್ಟಿ,ವೇದಾನಂದ ಕಾರಂತ ಅರಳ ಗ್ರಾ.ಪಂ.ಸದಸ್ಯ ಅಶ್ರಪ್, ಮತ್ತಿತರರು ಹಾಜರಿದ್ದರು.
ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಬಿಗಿ ಬಂದೋ ಬಸ್ತ್ ಮಾಡಿದ್ದರು

More from the blog

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...