ಬಂಟ್ವಾಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕರೋನದಿಂದ ಶೀಘ್ರ ಗುಣಮುಖರಾಗಲಿ ಹಾಗೂ ಲೋಕಕ್ಕೆ ಕಾಡುತ್ತಿರುವ ಮಹಾಮಾರಿ ಕರೋನದಿಂದ ಜನತೆಗೆ ಮುಕ್ತಿ ಸಿಗಲಿ ಎಂಬ ಆಶಯದೊಂದಿಗೆ ಬಂಟ್ವಾಳ ತಾಲೂಕು ಸಜೀಪ ಮೂಡ ಗ್ರಾಮದ ಅನ್ನಪಾಡಿ ಬಾಲ ಗಣಪತಿ ದೇವಸ್ಥಾನದಲ್ಲಿ ಬಾಲ ಗಣಪತಿ ಹೋಮ ಮಂಗಳವಾರ ಬೆಳಗ್ಗೆ ಗಂಟೆ 4ರಿಂದ 6.30 ತನಕ ಸಂಪನ್ನ ಗೊಂಡಿತು. ಎಲ್ಲಾ ಭಕ್ತ ಬಾಂದವರು ಅಭಿಮಾನಿಗಳು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.















