Friday, June 27, 2025

ಹೋಂ ಗಾರ್ಡ್ ಮಹಿಳಾ ಸಿಬ್ಬಂದಿ ಮನೆಗೆ ಅಧಿಕಾರಿಗಳು ಭೇಟಿ : ‘ನಮ್ಮ ಬಂಟ್ವಾಳ’ ವರದಿಗೆ ಸ್ಪಂದನೆ

ಮಂಗಳೂರು : ಗೃಹ ರಕ್ಷಕದಳದ ಸಿಬ್ಬಂದಿಯ ವ್ಯಥೆಯ ಕತೆ! ಎಂಬ ” ನಮ್ಮ ಬಂಟ್ವಾಳ ” ವರದಿಗೆ ಬಿಗ್ ಇಂಪ್ಯಾಕ್ಟ್ ಸಿಕ್ಕಿದೆ.
ಅನಾರೋಗ್ಯದಿಂದಿರುವ ನಿಷ್ಠಾವಂತ ಮಹಿಳಾ ಹೋಂ ಗಾರ್ಡ್ ಸಿಬ್ಬಂದಿ ಶಕ್ತಿನಗರ ಮೊಗರೋಡಿ ನಿವಾಸಿ ಚಂಪಾ ಅವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆಗೆ ದಾಖಲಿಸುವ ಭರವಸೆಯ ಮಾತುಗಳು ಸಿಕ್ಕಿದೆ.
ಚಂಪಾ ಅವರ ಮನೆಗೆ ಕದ್ರಿ ಟ್ರಾಫಿಕ್ ಪೋಲೀಸ್ ಠಾಣೆಯ ವೃತ್ತ ನಿರೀಕ್ಷಕ ಗೋಪಾಲಕೃಷ್ಣ ಭಟ್ ಅವರು ಭೇಟಿ ನೀಡಿ ನಾಳೆ ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲು ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.
ಅಲ್ಲದೆ ಗೃಹ ರಕ್ಷಕ ದಳದ ಕಮಾಂಡೆಂಟ್ ಮುರಳಿ ಮೋಹನ್ ಚೂತಾಂರು ಹಾಗೂ ಡೆಪ್ಯುಟಿ ಕಮಾಂಡೆಂಟ್ ರಮೇಶ್‌ ಅವರು ಭೇಟಿ ನೀಡಿ ಊಟಕ್ಕೆ ಅಕ್ಕಿ ನೀಡಿ ಭರವಸೆಯ ಮಾತುಗಳನ್ನಾಡಿದ್ದಾರೆ ಎಂದು ಚಂಪಾ ಅವರು “ನಮ್ಮ ಬಂಟ್ವಾಳ” ಕ್ಕೆ ತಿಳಿಸಿದ್ದಾರೆ.


ಅಲ್ಲದೆ ಇವರ ನೆರವಿಗೆ ಸಂಘ ಸಂಸ್ಥೆಗಳು ಮುಂದೆ ಬಂದಿದ್ದು, ಈಗಾಗಲೇ ಮಂಗಳೂರು ಯೋಗ ಗ್ರೂಪ್(spyss) ನಿಂದ 15 ದಿನಗಳಿಗೆ ಬೇಕಾದ ದಿನಬಳಕೆಯ ಕಿಟ್ ನ್ನು ಒದಗಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಅವಿವಾಹಿತೆ ಚಂಪಾ ಅವರು ಕಳೆದ 26 ವರ್ಷಗಳಿಂದ ಗೃಹ ರಕ್ಷಕದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ 11 ವರ್ಷಗಳಿಂದ ಕದ್ರಿ ಟ್ರಾಫಿಕ್ ಪೋಲೀಸ್ ಠಾಣೆ ಸರಹದ್ದಿನಲ್ಲಿ ಟ್ರಾಫಿಕ್ ಕೆಲಸವನ್ನು ಮಾಡುತ್ತಾ ಬಂದಿದ್ದರು. ಆದರೆ ಕಳೆದ 2 ತಿಂಗಳಿನಿಂದ ಇವರು ಅನಾರೋಗ್ಯಕ್ಕೆ ತುತ್ತಾಗಿ ಮನೆಯಲ್ಲಿದ್ದಾರೆ. ಅವರು ನಡೆದಾಡಲೂ ಸಾಧ್ಯವಿಲ್ಲದ ಸ್ಥಿತಿಯಲ್ಲಿ ಮನೆಯಲ್ಲಿದ್ದಾರೆ. ಒಂದು ಕಡೆಯಿಂದ ಕೆಲಸವಿಲ್ಲ, ಕೈಯಲ್ಲಿ ದುಡ್ಡಿಲ್ಲದೆ ಔಷಧಿಗಳನ್ನು ಪಡೆಯಲು ಸಾಧ್ಯ ವಿಲ್ಲ, ಊಟಕ್ಕೂ ಕಷ್ಟದ ಸ್ಥಿತಿಯಾಗಿದೆ ಎಂಬ ಬಗ್ಗೆ ವರದಿ ಮಾಡಲಾಗಿತ್ತು.
ತಂದೆ ತಾಯಿಯನ್ನು ಕಳೆದುಕೊಂಡಿರುವ ಅವಿವಾಹಿತೆ ಚಂಪಾ ಅವರಿಗೆ ತಂಗಿಯ ಆಶ್ರಯದಲ್ಲಿದ್ದಾರೆ. ಆದರೆ ತಂಗಿ ಗಂಡ ಉದಯ ಅವರೂ ಕೂಡ ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದು, ಇವರ ಮನೆಯಲ್ಲಿ ದುಡಿಯುವ ಕೈಗಳಿಲ್ಲ. ಈ ವರದಿಗೆ ಕೂಡಲೇ ಇಲಾಖಾ ಅಧಿಕಾರಿಗಳು ಸ್ಫಂದಿಸಿ ಅವರ ಸಹಾಯಕ್ಕೆ ನಿಂತಿದ್ದಾರೆ.

ಇವರ ಮೊಬೈಲು ಸಂಖ್ಯೆ ಮತ್ತು ಬ್ಯಾಂಕ್ ಡಿಟೈಲ್ ಇಲ್ಲಿದೆ. ಸಹಕಾರ ನೀಡುವವರು ಸಂಪರ್ಕ ಮಾಡಬಹುದು.

Mobile No. 8123869879

SBI Branch :State Bank SB Ac No. 20210215667

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...