Friday, July 4, 2025

ಏಪ್ರಿಲ್ 1 ರಿಂದ ಮನೆ ಸಮೀಕ್ಷೆ: ನೀವು ನೀಡಲೇಬೇಕಾದ 31 ಮಾಹಿತಿಗಳು ಯಾವುವು ?

ಮಂಗಳೂರು: ಏಪ್ರಿಲ್ 1ರಿಂದ ಮನೆ ಸಮೀಕ್ಷೆ ಪ್ರಾರಂಭವಾಗಲಿದ್ದು, ನೀವು ಯಾವೆಲ್ಲಾ ವಿವರಗಳನ್ನು ನೀಡ್ಬೇಕು ಎಂಬ ಮಾಹಿತಿ ಇಲ್ಲಿದೆ. ಪೌರತ್ವ ಮಸೂದೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಬಗ್ಗೆ ದೇಶವ್ಯಾಪಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ದೇಶವ್ಯಾಪಿ ಮನೆ ಗಣತಿಗೆ ಗುರುವಾರ ಅಧಿಸೂಚನೆ ಹೊರಡಿಸಿದೆ.
ಮನೆಗೆ ಭೇಟಿ ನೀಡಲಿರುವ ಗಣತಿದಾರರು, ಮನೆಯ ಯಜಮಾನರ ಮೊಬೈಲ್ ನಂಬರ್‍ ಸೇರಿದಂತೆ ಒಟ್ಟು 31 ಬಗೆಯ ಮಾಹಿತಿಗಳನ್ನು ಪಡೆದುಕೊಳ್ಳಲಿದ್ದಾರೆ.
ನೀವು ನೀಡಬೇಕಾದ ಮಾಹಿತಿಯ ವಿವರ:
ಮನೆ ಮಾಲಿಕರ ಮೊಬೈಲ್ ನಂಬರ್ ಸೇರಿದಂತೆ ಮನೆಯಲ್ಲಿರುವ ಶೌಚಾಲಯ, ಸ್ನಾನ ಗೃಹ, ತ್ಯಾಜ್ಯ ನಿರ್ವಹಣೆ, ಟಿವಿ, ಮೊಬೈಲ್, ರೇಡಿಯೋ, ಲ್ಯಾಪ್‌ಟಾಪ್, ಕಂಪ್ಯೂಟರ್, ಸೈಕಲ್, ವಾಹನಗಳ ನೋಂದಣಿ ಸಂಖ್ಯೆ, ಮನೆ ನಂಬರ್, ಮನೆಯಲ್ಲಿರುವ ಸದಸ್ಯರ ಸಂಖ್ಯೆ, ವಿವಾಹಿತರ ಸಂಖ್ಯೆ, ಅಡುಗೆ ಮನೆ ನೆಲದ ವಿಧ, ಮನೆಯ ಸ್ಥಿತಿ, ವಿದ್ಯುತ್ ಸೌಲಭ್ಯ ಜಾತಿ, ಕುಡಿಯುವ ನೀರಿನ ಮೂಲಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ರಿಜಿಸ್ಟ್ರಾರ್ ಜನರಲ್ ಮತ್ತು ಗಣತಿ ಆಯುಕ್ತರು, ಗಣತಿ ಅಧಿಕಾರಿಗಳು ಏಪ್ರಿಲ್ 1ರಿಂದ ಸೆಪ್ಟೆಂಬರ್ ವರೆಗೆ ದೇಶದೆಲ್ಲೆಡೆ ಮನೆಗಣತಿ ಮಾಡಲಿದ್ದಾರೆ.
2021ರಲ್ಲಿ ನಡೆಸಲು ಉದ್ದೇಶಿರುವ ಜನಗಣತಿಗೆ ಪೂರ್ವವಾಗಿ ಸರ್ಕಾರ ಈ ಮನೆ ಗಣತಿ ನಡೆಸುತ್ತಿದೆ. ಇದರಲ್ಲಿ ಮನೆಯ ಯಜಮಾನರ ಮೊಬೈಲ್ ನಂಬರ್ ಸೇರಿ ವಿವಿಧ ರೀತಿಯ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಜನಗಣತಿ ಸಂಬಂಧ ಮಾಹಿತಿ ಹಂಚಿಕೊಳ್ಳಲು ಮಾತ್ರ ಮೊಬೈಲ್ ನಂಬರ್ ಉಪಯೋಗಿಸಿಕೊಳ್ಳಲಾಗುತ್ತದೆ.

More from the blog

ಮಧ್ವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಿಡ ನಾಟಿ ಹಾಗೂ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ) ಬಂಟ್ವಾಳ ಇದರ,ವಗ್ಗ ವಲಯದ ಮಧ್ವ ಒಕ್ಕೂಟದ ವತಿಯಿಂದ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ : ನ್ಯಾಯಕ್ಕಾಗಿ ಡಿವೈಎಸ್ಪಿ ಗೆ ಮನವಿ..

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ದ.ಕ.ಜಿಲ್ಲಾಧಿಕಾರಿಗಳು, ಎಸ್ಪಿಯವರು ಹಾಗೂ ಬಂಟ್ವಾಳ ನಗರ ಇನ್ಸ್‌ಪೆಕ್ಟರ್ ಅವರ ಮೂಲಕ...

ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ: ಕ್ಷಯರೋಗಿಗಳಿಗೆ ಆಹಾರ ಕಿಟ್ ವಿತರಣೆ

ಬಂಟ್ವಾಳ : ತಾಲೂಕಿನ ಇರ್ವತ್ತೂರು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಂಟು ಗ್ರಾಮಗಳ ವ್ಯಾಪ್ತಿಯ ಕ್ಷಯರೋಗಿಗಳಿಗೆ ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ ಯೋಜನೆಯಡಿ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್ ವಿತರಣಾ...

School holiday:ಬಂಟ್ವಾಳ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ

ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ರಜೆ ಘೋಷಿಸಲಾಗಿದೆ...