Thursday, February 13, 2025

ಹೊರೈಝನ್ ಸ್ಕೂಲ್ ಶಿಕ್ಷಕ-ರಕ್ಷಕ ಸಭೆ

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕ ಸಭೆಯು ಶಾಲೆಯ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಮಸೀದಿಯ ಅಧ್ಯಕ್ಷ ಇಬ್ರಾಹಿಂ ಮೇಗಿನಪೇಟೆ, ಶಾಲೆಯ ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆಕಾರ್ಯದರ್ಶಿ ಹನೀಫ್ ಎಂ.ಎ.,ಸಂಚಾಲಕ ನೋಟರಿ ಅಬೂಬಕರ್, ಮೇಲ್ವಿಚಾರಕ ವಿ.ಕೆ.ಎಂ.ಅಶ್ರಫ್, ಸದರ್ ಉಮರ್ ಸಅದಿ, ಟ್ರಸ್ಟಿಗಳಾದ ಸಿದ್ದೀಕ್ ಮಾಲಮೂಲೆ, ಅಬ್ದುಲ್ ರಹಿಮಾನ್ ದೀಪಕ್, ಇಕ್ಬಾಲ್ ಹಳೆಮನೆ, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.
ಖತೀಬ್ ಮಹಮ್ಮದ್ ಅಲಿ ಫೈಝಿ ದುವಾ ನೆರವೇರಿಸಿದರು. ಮುಖ್ಯ ಶಿಕ್ಷಕಿ ವಿಲಾಸಿನಿ ಪ್ರಸ್ತಾವನೆ ಗೈದರು. ಸಹಶಿಕ್ಷಕಿ ಚೈತ್ರಾ ಸ್ವಾಗತಿಸಿದರು. ಮಾಸಿತಾ ವಂದಿಸಿದರು. ಶಿಕ್ಷಕಿ ಚೇತನಾ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭ ಶಾಲಾ ಮತ್ತು ಮದರಸದ ಶಿಕ್ಷಕರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...