Friday, February 7, 2025

ವಿಟ್ಲ ಹೊರೈಝನ್ ಶಾಲೆಗೆ ಚಾಂಪಿಯನ್

ವಿಟ್ಲ: ಇಲ್ಲಿಯ ಮೇಗಿನಪೇಟೆ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯು ವಿಟ್ಲ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ವಿಟ್ಲ ರೇಂಜ್ ಮದರಸ ಮೆನೇಜ್‌ಮೆಂಟ್ ಆಶ್ರಯದಲ್ಲಿ ಕೆಲಿಂಜದಲ್ಲಿ ನಡೆದ ಮದರಸ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧೆ ಮಿಲಾದ್ ಫೆಸ್ಟ್‌ನಲ್ಲಿ ದ್ವಿತೀಯ ಚಾಂಪಿಯನ್ ಶಿಪ್ ಆಗಿ ಹೊರಹೊಮ್ಮಿದೆ.
ಜೂನಿಯರ್ ವಿಭಾಗದ ಕನ್ನಡ ಹಾಡಿನಲ್ಲಿ ರಿಜ್ವಾನ್, ಕನ್ನಡ ಕಥಾಪ್ರಸಂಗದಲ್ಲಿ ಸೈಫ್ ಸೊಂಡೆ, ಡ್ರಾಯಿಂಗ್‌ನಲ್ಲಿ ಸಲ್ಮಾನ್ ಫಾರೀಸ್, ಕ್ವಿಜ್‌ನಲ್ಲಿ ರಶೀದ್. ಸಬ್ ಜ್ಯೂನಿಯರ್ ವಿಭಾಗದಲ್ಲಿ ಹಿಫಿಲ್‌ನಲ್ಲಿ ತಸ್ರೀಪ್ ಹಾಗೂ ಕನ್ನಡ ಹಾಡಿನಲ್ಲಿ ತಬೀಸ್, ಸೀನಿಯರ್ ವಿಭಾಗದ ಬಾಂಗ್‌ನಲ್ಲಿ ಮಹಮ್ಮದ್ ತಾನೀಸ್, ಹಿಫಿಲ್‌ನಲ್ಲಿ ಮಹಮ್ಮದ್ ಅಜೀಮ್, ಕನ್ನಡ ಭಾಷಣದಲ್ಲಿ ಹಾಸೀಂ ಅಹ್ಮದ್, ಅರಬಿ ಭಾಷಣದಲ್ಲಿ ಮಹಮ್ಮದ್ ತೌವೀದ್, ಹಾಗೂ ಕನ್ನಡ ಪ್ರಬಂಧದಲ್ಲಿ ಮಹಮ್ಮದ್ ಸಲೀತ್ ಪ್ರಶಸ್ತಿ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಆವರಣದಲ್ಲಿ ಬುಧವಾರ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಸಮಿತಿ ಅಧ್ಯಕ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಉಪಾಧ್ಯಕ್ಷ ಗಫುರ್ ಮೇಗಿನಪೇಟೆ, ಕಾರ್‍ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್‍ಯದರ್ಶಿ ಹನೀಫ್ ಎಂ.ಎ., ಮಸೀದಿಯ ಆಡಳಿತ ಸಮಿತಿ ಕಾರ್‍ಯದರ್ಶಿ ನೋಟರಿ ಅಬೂಬಕರ್ ವಿಟ್ಲ, ಶಾಲಾ ಮೇಲ್ವಿಚಾರಕ ವಿ.ಕೆಎಂ.ಅಶ್ರಫ್, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ, ಸದರ್ ಉಮರ್ ಸಅದಿ ಇಸ್ಮಾಯಿಲ್ ಹನೀಫಿ, ಹಕೀಂ ಅರ್ಷದಿ, ಅಬೂಬಕರ್ ಮುಸ್ಲಿಯಾರ್, ಮಹಮ್ಮದ್ ಮುಸ್ಲಿಯಾರ್ ಭಾಗವಹಿಸಿದ್ದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...