Friday, June 27, 2025

ವಿಟ್ಲ ಹೊರೈಝನ್ ಶಾಲೆಗೆ ಚಾಂಪಿಯನ್

ವಿಟ್ಲ: ಇಲ್ಲಿಯ ಮೇಗಿನಪೇಟೆ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯು ವಿಟ್ಲ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ವಿಟ್ಲ ರೇಂಜ್ ಮದರಸ ಮೆನೇಜ್‌ಮೆಂಟ್ ಆಶ್ರಯದಲ್ಲಿ ಕೆಲಿಂಜದಲ್ಲಿ ನಡೆದ ಮದರಸ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧೆ ಮಿಲಾದ್ ಫೆಸ್ಟ್‌ನಲ್ಲಿ ದ್ವಿತೀಯ ಚಾಂಪಿಯನ್ ಶಿಪ್ ಆಗಿ ಹೊರಹೊಮ್ಮಿದೆ.
ಜೂನಿಯರ್ ವಿಭಾಗದ ಕನ್ನಡ ಹಾಡಿನಲ್ಲಿ ರಿಜ್ವಾನ್, ಕನ್ನಡ ಕಥಾಪ್ರಸಂಗದಲ್ಲಿ ಸೈಫ್ ಸೊಂಡೆ, ಡ್ರಾಯಿಂಗ್‌ನಲ್ಲಿ ಸಲ್ಮಾನ್ ಫಾರೀಸ್, ಕ್ವಿಜ್‌ನಲ್ಲಿ ರಶೀದ್. ಸಬ್ ಜ್ಯೂನಿಯರ್ ವಿಭಾಗದಲ್ಲಿ ಹಿಫಿಲ್‌ನಲ್ಲಿ ತಸ್ರೀಪ್ ಹಾಗೂ ಕನ್ನಡ ಹಾಡಿನಲ್ಲಿ ತಬೀಸ್, ಸೀನಿಯರ್ ವಿಭಾಗದ ಬಾಂಗ್‌ನಲ್ಲಿ ಮಹಮ್ಮದ್ ತಾನೀಸ್, ಹಿಫಿಲ್‌ನಲ್ಲಿ ಮಹಮ್ಮದ್ ಅಜೀಮ್, ಕನ್ನಡ ಭಾಷಣದಲ್ಲಿ ಹಾಸೀಂ ಅಹ್ಮದ್, ಅರಬಿ ಭಾಷಣದಲ್ಲಿ ಮಹಮ್ಮದ್ ತೌವೀದ್, ಹಾಗೂ ಕನ್ನಡ ಪ್ರಬಂಧದಲ್ಲಿ ಮಹಮ್ಮದ್ ಸಲೀತ್ ಪ್ರಶಸ್ತಿ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಆವರಣದಲ್ಲಿ ಬುಧವಾರ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಸಮಿತಿ ಅಧ್ಯಕ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಉಪಾಧ್ಯಕ್ಷ ಗಫುರ್ ಮೇಗಿನಪೇಟೆ, ಕಾರ್‍ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್‍ಯದರ್ಶಿ ಹನೀಫ್ ಎಂ.ಎ., ಮಸೀದಿಯ ಆಡಳಿತ ಸಮಿತಿ ಕಾರ್‍ಯದರ್ಶಿ ನೋಟರಿ ಅಬೂಬಕರ್ ವಿಟ್ಲ, ಶಾಲಾ ಮೇಲ್ವಿಚಾರಕ ವಿ.ಕೆಎಂ.ಅಶ್ರಫ್, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ, ಸದರ್ ಉಮರ್ ಸಅದಿ ಇಸ್ಮಾಯಿಲ್ ಹನೀಫಿ, ಹಕೀಂ ಅರ್ಷದಿ, ಅಬೂಬಕರ್ ಮುಸ್ಲಿಯಾರ್, ಮಹಮ್ಮದ್ ಮುಸ್ಲಿಯಾರ್ ಭಾಗವಹಿಸಿದ್ದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...