Saturday, January 31, 2026

ದ. ಕ. 7 ಆಸ್ಪತ್ರೆ ರಾಷ್ಟ್ರ ಮಟ್ಟಕ್ಕೆ ನಾಮ ನಿರ್ದೇಶನ

ಮಂಗಳೂರು: ಗುಣಮಟ್ಟದ ಸೇವೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಿತ ಒಟ್ಟು 13 ಸರಕಾರಿ ಆಸ್ಪತ್ರೆಗಳು ಕೇಂದ್ರ ಸರಕಾರವು ರಾಷ್ಟ್ರಮಟ್ಟದಲ್ಲಿ ನೀಡುವ “ಎನ್‌ಕ್ಯುಎಎಸ್‌’ ಪ್ರಮಾಣಪತ್ರಕ್ಕೆ ನಾಮನಿರ್ದೇಶನಗೊಂಡಿವೆ.

ಗುಣಮಟ್ಟದ ಸೇವೆ, ನೈರ್ಮಲ್ಯ, ದಾಖಲಾತಿಗಳ ನಿರ್ವಹಣೆ ಮೊದಲಾದ ರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ಮೊದಲು ರಾಜ್ಯ ಮಟ್ಟದಲ್ಲಿ ಆಯ್ಕೆ ನಡೆಯುತ್ತದೆ.

ಅನಂತರ ರಾಷ್ಟ್ರಮಟ್ಟಕ್ಕೆ ನಾಮನಿರ್ದೇಶನಗೊಂಡು ಆಯ್ಕೆಯಾಗುತ್ತವೆ.

ಏನಿದು ಎನ್‌ಕ್ಯುಎಎಸ್‌?

ಎನ್‌ಕ್ಯುಎಎಸ್‌ ಎಂಬುದು ಗುಣಮಟ್ಟ ಪ್ರಮಾಣೀಕರಣ ಮಾನದಂಡ. ಆರೋಗ್ಯ ಸೇವಾ ಸಂಸ್ಥಾಪನೆಗಳ ಗುಣಮಟ್ಟಕ್ಕಾಗಿ ವಿವಿಧ ಹಂತಗಳಲ್ಲಿ ನೀಡಲಾಗುತ್ತದೆ. “ಎನ್‌ಕ್ಯುಎಎಸ್‌’ಗೆ ನಾಮ ನಿರ್ದೇಶನ ಸಂದರ್ಭದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು ಆರೋಗ್ಯ ಸೇವಾ ಕೇಂದ್ರಗಳ ಶೇ. 10ನ್ನು ನಾಮನಿರ್ದೇಶನ ಮಾಡಲಾಗುತ್ತದೆ. ನಾಮನಿರ್ದೇಶನಗೊಂಡ ಆಸ್ಪತ್ರೆ/ ಕೇಂದ್ರ ಗಳು ಒಮ್ಮೆ ಈ ಪ್ರಮಾಣೀಕರಣ ಪಡೆಯಲು ವಿಫ‌ಲವಾದರೆ ಗುಣಮಟ್ಟ ವೃದ್ಧಿಸಿಕೊಳ್ಳಲು ಸಮಯ ನೀಡಲಾಗುತ್ತದೆ. ಪ್ರಮಾಣೀಕರಣ ಪಡೆದಾಗ ಪ್ರಶಸ್ತಿನಿಧಿ ದೊರಕುತ್ತದೆ.

 

ಯಾವೆಲ್ಲ ಕೇಂದ್ರಗಳು?

ದಕ್ಷಿಣ ಕನ್ನಡ ಜಿಲ್ಲೆ

- ವೆನ್ಲಾಕ್ ಜಿಲ್ಲಾಸ್ಪತ್ರೆಯ 10 ವಿಭಾಗಗಳು

- ಲೇಡಿಗೋಶನ್‌ ಆಸ್ಪತ್ರೆಯ 6 ವಿಭಾಗಗಳು

- ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರ (ಸಿಎಚ್‌ಸಿ)

- ಮೂಡುಬಿದಿರೆ ಸಿಎಚ್‌ಸಿ

- ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)

- ಜೆಪ್ಪು ನಗರ ಪ್ರಾ.ಆ. ಕೇಂದ್ರ (ಯುಪಿಎಚ್‌ಸಿ)

- ನಾರಾವಿ ಪಿಎಚ್‌ಸಿ

 

ಉಡುಪಿ ಜಿಲ್ಲೆ

- ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆ

- ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವಿಭಾಗಗಳು

- ಶಂಕರನಾರಾಯಣ ಪ್ರಾ.ಆ. ಕೇಂದ್ರ

- ಬ್ರಹ್ಮಾವರ ಸಿಎಚ್‌ಸಿ

- ಕೋಟ ಸಿಎಚ್‌ಸಿ

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...