Thursday, June 26, 2025

ಹೊಟೇಲ್ ಡೈನಿಂಗ್‌ಗೆ ಜೂ.1 ರಿಂದ ಅವಕಾಶ ಸಾಧ್ಯತೆ

 

ಕೊರೊನಾ ವೈರಸ್ ಪ್ರಭಾವದಿಂದಾಗಿ ಅತಿ ಹೆಚ್ಚು ಪೆಟ್ಟು ತಿಂದಿರುವುದರಲ್ಲಿ ಹೋಟೆಲ್ ಉದ್ಯಮ ಕೂಡ ಒಂದು. ಲಾಕ್‌ಡೌನ್‌ ಸಡಿಲಗೊಳಿಸಿ ಬಹುತೇಕ ಆರ್ಥಿಕ ಚಟುವಟಿಕೆ ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ನೀಡಿರುವ ಸರ್ಕಾರ ಹೋಟೆಲ್‌ಗ‌ಳ ಮೇಲಿನ ನಿರ್ಬಂಧ ಮಾತ್ರ ಮುಂದುವರಿಸಿದೆ. ಈ ನಡುವೆ ಹೋಟೆಲ್ ಉದ್ಯಮ ಸಂಕಷ್ಟದಲ್ಲಿ ತಿಂಗಳ ನಂತರ ಹೋಟೆಲ್ ಪುನರಾರಂಭಕ್ಕೆ ಸಿಎಂ ಯಡಿಯೂರಪ್ಪ ಅವರು ಅವಕಾಶ ಮಾಡಿಕೊಡಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಹೋಟೆಲ್ ಉದ್ಯಮ ಸಿಲುಕಿದೆ. ಆದರೂ ಹೋಟೆಲ್ ಮಾಲೀಕರು ಸಿಬ್ಬಂದಿಗಳಿಗೆ 2-3 ತಿಂಗಳಿನಿಂದಲೂ ವೇತನ ಕೊಟ್ಟು ಸಲಹುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತಮ್ಮ ಸಂಕಟ ಹೇಳಿಕೊಂಡಿದ್ದಾರೆ. ಮೇ 31ಕ್ಕೆ ನಾಲ್ಕನೇ ಹಂತ ಲಾಕ್‍ಡೌನ್ ಅವಧಿ ಮುಗಿಯಲಿದೆ. ಹೀಗಾಗಿ ಜೂ.1 ರ ಬಳಿಕ ಸಿಎಂ ಹೋಟೆಲ್ ಡೈನಿಂಗ್ ಗೆ ಅವಕಾಶ ಮಾಡಿಕೊಡ್ತಾರೆ ಎನ್ನುವ ವಿಶ್ವಾಸವಿದೆ ವಿಶ್ವನಾಥ್ ಹೇಳಿದ್ದಾರೆ

ಹೋಟೆಲ್ ಪುನರಾರಂಭಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಬಿಸಿ ನೀರನ್ನು ಬಳಕೆ ಮಾಡುವುದು, ಹಾಗೂ ಪಾರ್ಸಲ್ ಗಳಿಗೆ ಹೆಚ್ಚು ಉತ್ತೇಜನ ನೀಡುವುದು ಮುಂತಾದ ಷರತ್ತು ಬದ್ಧ ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಅವರು ಇದೇ ಸಂದರ್ಭ ತಿಳಿಸಿದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...