Friday, February 6, 2026

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಮಾನವೀಯತೆ ಮೆರೆದ ಹೋಟೆಲ್ ಸಮುದ್ರ ಮಾಲಕ ಕರುಣಾಕರ ಶೆಟ್ಟಿ

ಬಂಟ್ವಾಳ: ಹೋಟೆಲ್ ಗೆ ಚಹಾ ಕುಡಿಯಲು ಬಂದು ಅಲ್ಲೇ ಬಿಟ್ಟು ಹೋಗಿದ್ದ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಬ್ಯಾಗ್ ನ್ನು ವಾರಸುದಾರರಿಗೆ ಹಸ್ತಾಂತರ ಮಾಡಿ ಮಾನವೀಯತೆ ಮೆರೆದ ಘಟನೆ ಕಲ್ಲಡ್ಕದ ಕುದ್ರೆಬೆಟ್ಟು ಎಂಬಲ್ಲಿನ ಹೋಟೆಲ್ ಒಂದರಲ್ಲಿ ನಡೆದಿದೆ.

ತಮಿಳುನಾಡು ಮೂಲದ ವ್ಯಕ್ತಿಗಳು ಮಂಗಳೂರಿಗೆ ಕೆಲಸದ ‌ನಿಮಿತ್ತ ಆಗಮಿಸಿ, ವಾಪಾಸು ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನೂತನ ವಾಗಿ ಆರಂಭವಾದ ಸಮುದ್ರ ಹೋಟೆಲ್ ಗೆ ಚಹಾ ಕುಡಿಯಲು ಹೋಗಿದ್ದರು. ಚಹಾ ಕುಡಿಯುವ ವೇಳೆ ಟೇಬಲ್ ಮೇಲೆ ಲಕ್ಷಾಂತರ ರೂ ನಗದು ಹಾಗೂ ಚಿನ್ನಾಭರಣವಿದ್ದ ಬ್ಯಾಗ್ ನ್ನು ಇಟ್ಟಿದ್ದರು. ಆದರೆ ಚಹಾ ಕುಡಿದ ಬಳಿಕ ಈ ಕುಟುಂಬ ಬ್ಯಾಗ್ ನ ಅರಿವಿಲ್ಲದ ಸೀದಾ ಕಾರು ಹತ್ತಿ ತೆರಳಿದ್ದರು. ಆದರೆ ಹೋಟೆಲ್ ಮಾಲಕ ‌ಕರುಣಾಕರ ಶೆಟ್ಟಿ ಅವರು ಬ್ಯಾಗ್ ನ್ನು ಗಮನಿಸಿ ಸೇಫ್ ಆಗಿ ಇಟ್ಟಿದ್ದರು. ಜೊತೆಗೆ ಇದರಲ್ಲಿ ಕಂಡು ಬಂದ ಮೊಬೈಲ್ ಸಂಖ್ಯೆ ಯ ಮೂಲಕ ಬ್ಯಾಗ್ ಮಾಲಕರ ಪತ್ತೆ ಮಾಡವಲ್ಲಿ ಯಶಸ್ವಿಯಾದರು.

ಅದಾಗಲೇ ಬ್ಯಾಗ್ ಮಾಲಕರು ಇದರ ಅರಿವಿಲ್ಲದ ಬೆಂಗಳೂರು ತಲುಪಿದ್ದರು. ಪೋನ್ ಕರೆಗೆ ಎಚ್ಚರಗೊಂಡ ಅವರು ಅಲ್ಲಿಂದಲೇ ವಾಪಾಸು ಬಂದು ಬ್ಯಾಗ್ ನ್ನು ಪಡೆದುಕೊಂಡಿದ್ದಾರೆ. ಹೋಟೆಲ್ ಮಾಲಕನ ಮಾನವೀಯ ಗುಣಗಳ ಬಗ್ಗೆ ಅವರು ಕೊಂಡಾಡಿ ಅವರಿಗೆ ಧನ್ಯವಾದ ಹೇಳಿದ್ದಾರೆ.

ಬ್ಯಾಗ್ ಸೇಫ್ ಆಗಿ ಪಡೆದ ಕುಟುಂಬ ಹೋಟೇಲ್ ಮಾಲಕರಿಗೆ ಗಿಪ್ಟ್ ನೀಡಲು ಮುಂದಾಗಿತ್ತು. ಆದರೆ ಹೋಟೆಲ್ ಮಾಲಕ ಎಲ್ಲವನ್ನು ನಿರಾಕರಣೆ ಮಾಡಿ ಅವರು ಉತ್ತಮ ರೀತಿಯಲ್ಲಿ ಉಪಚರಿಸಿ ವಾಪಾಸು ಕಳುಹಿಸಿ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಹೆದ್ದಾರಿಯಲ್ಲಿ ದಾರಿ ಸೂಚನಾ ಫಲಕ ಅಳವಡಿಕೆ..

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿರೋಡ್ - ಅಡ್ಡಹೊಳೆ ಚತುಷ್ಪಥ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೀಗ ಕಮಾನು ಮಾದರಿಯಲ್ಲಿ ದಾರಿ ಸೂಚಕ ಫಲಕ ಅಳವಡಿಕೆಯ ಕಾರ್ಯ ಆರಂಭಗೊಂಡಿದೆ. ರಸ್ತೆ ನಿರ್ಮಾಣದ ಕಾಂಕ್ರೀಟ್ ಕಾಮಗಾರಿ...