Wednesday, January 28, 2026

ಇಡ್ಕಿದು: ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ

ವಿಟ್ಲ: ಪಂಚಾಯಿತಿ ಸದಸ್ಯರೆಲ್ಲರ ಒಗ್ಗೂಡುವಿಕೆಯಿಂದ, ಗ್ರಾಮಸ್ಥರ ಸಹಕಾರದೊಂದಿಗೆ ಅಭಿವೃದ್ದಿ ಕಾರ್ಯಗಳನ್ನು ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಇಡ್ಕಿದು ಗ್ರಾಮ ಪಂಚಾಯಿತಿ ಯಶಸ್ವಿಯಾಗಿ ಅಭಿವೃದ್ದಿ ಕಾಮಗಾರಿಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಉದ್ಯೋಗ ಖಾತರಿ ಯೋಜನೆಯ ಅನುದಾನವನ್ನು ನೋಂದಾಯಿತ ಉದ್ಯೋಗ ಚೀಟಿ ಹೊಂದಿರುವ ಅಕುಶಲ ಕಾರ್ಮಿಕರನ್ನು ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳು ನಡೆಯುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು.
ಅವರು ಇಡ್ಕಿದು-ಕುಳ ಗ್ರಾಮ ವ್ಯಾಪ್ತಿಯ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಮಿತ್ತೂರು- ಆಲದಗುಂಡಿ – ಕಬಕ ಕೂಡುರಸ್ತೆ ಕಾಂಕ್ರೀಟೀಕರಣದ ಉದ್ಘಾಟನೆ, ಕುಳ ಗ್ರಾಮದ ಕಬಕ -ಅಡ್ಯಾಲು ರಸ್ತೆ ಅಭಿವೃದ್ದಿ ಮತ್ತು ಇಡ್ಕಿದು ಗ್ರಾಮದ ಕಲ್ಲಸರ್ಪೆ ಜನತಾ ಕಾಲನಿ ರಸ್ತೆ ಅಭಿವೃದ್ದಿ ಕಾಮಗಾರಿಗಗಳಿಗೆ ತಲಾ ರೂ 10.00 ಲಕ್ಷ ಅನುದಾನವನ್ನು ಮೀಸಲಿರಿಸಿ ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಪಂ.ಅಧ್ಯಕ್ಷರಾದ ಚಂದ್ರಾವತಿ, ಜಿಲ್ಲಾ ಪಂ.ಸದಸ್ಯರಾದ ಜಯಶ್ರೀ ಕೋಡಂದೂರು, ತಾ.ಪಂ.ಸದಸ್ಯೆ ವನಜಾಕ್ಷಿ ಎಸ್.ಭಟ್, ಪುತ್ತೂರು ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ , ಸ.ಕಾ.ನಿ.ಅಭಿಯಂತರರಾದ ಷಣ್ಮುಗಂ, ಕಿರಿಯ ಇಂಜಿನಿಯರರಾದ ಪ್ರೀತಂ, ಪಂ.ಸದಸ್ಯರುಗಳಾದ ಜಯರಾಮ ಕಾರ್ಯಾಡಿಗುತ್ತು, ವಸಂತಿ, ಜಗದೀಶ್ವರಿ, ಶಾರದಾ, ರಸಿಕಾ, ಇಡ್ಕಿದು ಸೇ.ಸ.ಬ್ಯಾಂಕಿನ ನಿರ್ದೆಶಕರಾದ ರಮೇಶ್ ಭಟ್ ಮಿತ್ತೂರು, ಸುರೇಶ್ ಮುಕ್ಕುಡ, ಅಂಗನವಾಡಿ ಹಾಗೂ ಗ್ರಾಮಸ್ಥರು ಹಾಜರಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಎಂ.ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

More from the blog

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...