Saturday, February 8, 2025

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನಸೆಳೆದಿದ್ದಾರೆ.

ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಉಲ್ಲೇಖಿಸಿದ ಕ್ಯಾ. ಚೌಟ ಅವರು, 905 ಹಾಸಿಗೆಗಳ ವೆನ್ಲಾಕ್ ಆಸ್ಪತ್ರೆಯಲ್ಲಿ ದಾದಿಯರ ಕೊರತೆ ಕಾಡುತ್ತಿದೆ. ಸರ್ಕಾರಿ ಮಾರ್ಗಸೂಚಿ ಪ್ರಕಾರ ಇಲ್ಲಿ 483 ನರ್ಸಿಂಗ್ ಸಿಬ್ಬಂದಿ ಅಗತ್ಯವಿದ್ದು, ಪ್ರಸ್ತುತ ಕೇವಲ 265 ಶುಶ್ರೂಷಕಿಯರು ಸೇವೆ ಸಲ್ಲಿಸುತ್ತಿದ್ದಾರೆ. ವೆನ್ಲಾಕ್ನಲ್ಲಿ ನುರಿತ, ಅನುಭವಿ ವೈದ್ಯರ ತಂಡ ಕಾರ್ಯನಿರ್ವಹಿಸುತ್ತಿದ್ದರೂ ನರ್ಸ್ ಗಳ ಕೊರತೆಯಿಂದಾಗಿ ರೋಗಿಗಳಿಗೆ ಪೂರ್ಣ ಪ್ರಮಾಣದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಹಿನ್ನಡೆಯಾಗುತ್ತಿದೆ ಎಂದು ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಗಮನಕ್ಕೆ ತಂದಿದ್ದಾರೆ.

ವೆನ್ಲಾಕ್ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಾಗಿದ್ದು, ಕೇವಲ ಇಲ್ಲಿ ಮಾತ್ರ ಶುಶ್ರೂಷಕಿಯರ ಕೊರತೆ ಇರುವುದಲ್ಲ; ದೇಶದೆಲ್ಲೆಡೆ, ಅದರಲ್ಲಿಯೂ ಗ್ರಾಮೀಣ ಭಾರತದ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ದಾದಿಯರ ಕೊರತೆ ಎದುರಿಸುತ್ತಿರುವ ಬಗ್ಗೆ ಅನೇಕ ವರದಿಗಳು ಪ್ರಕಟಗೊಂಡಿವೆ. ಇಂಥ ಪರಿಸ್ಥಿತಿಯಲ್ಲಿ ಕೆಲವೊಮ್ಮೆ ಅನಿವಾರ್ಯವಾಗಿ ರೋಗಿಗಳು ಸೂಕ್ತ ತರಬೇತಿ ಪಡೆಯದ ಪರಿಚಾರಕರನ್ನು ಅವಲಂಬಿಸಬೇಕಾಗಿ ಬರುತ್ತದೆ. ಇದು ರೋಗಿಗಳ ಚಿಕಿತ್ಸೆ ಹಾಗೂ ಆರೈಕೆ ಗುಣಮಟ್ಟದ ಮೇಲೂ ಪರಿಣಾಮ ಬೀರಬಹುದು ಎಂದು ಹೇಳಿದರು.

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ

ಎಂಬಿಬಿಎಸ್ ಪದವಿ ಪಡೆದವರಿಗೆ ಗ್ರಾಮೀಣ ಭಾಗದಲ್ಲಿ ತರಬೇತಿ ಕಡ್ಡಾಯಗೊಳಿಸಿರುವಂತೆಯೇ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ನರ್ಸಿಂಗ್ ವಿದ್ಯಾರ್ಥಿಗಳಿಗೂ ಇಂಟರ್ನ್ಶಿಪ್ ಜಾರಿಗೊಳಿಸಬೇಕು. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಭಾರತೀಯ ನರ್ಸಿಂಗ್ ಕೌನ್ಸಿಲ್ಗೆ ಮನವಿ ಮಾಡಬೇಕು. ಇದು ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸುವುದಲ್ಲದೆ, ಭಾರತದ ಸರ್ಕಾರಿ ಆಸ್ಪತ್ರೆಗಳಲ್ಲಿ ದಾದಿಯರ ಸೇವಾ ಗುಣಮಟ್ಟ ವೃದ್ಧಿಗೂ ಸಹಕಾರಿಯಾಗಲಿದೆ. ಜತೆಗೆ, ರೋಗಿಗಳಿಗೂ ಉತ್ತಮ ರೀತಿಯ ಆರೈಕೆ ದೊರೆಯುತ್ತದೆ ಎಂದು ಕ್ಯಾ. ಚೌಟ ಇದೇ ವೇಳೆ ಸಲಹೆ ನೀಡಿದ್ದಾರೆ.

More from the blog

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...

ಬಂಟ್ವಾಳ : ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ: ಪ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ  ನಡೆದಿದೆ. ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ. ರಾಜೇಶ್  ಸಜೀಪ...

ಶ್ರೀ ಒಡಿಯೂರು ರಥೋತ್ಸವ – ಜಾತ್ರೆ ಅಂಗವಾಗಿ ನಡೆಯಿತು ಧರ್ಮಸಭೆ

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದ ಆತ್ರೇಯ ಮಂಟಪದಲ್ಲಿ ಶುಕ್ರವಾರ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಧರ್ಮಸಭೆ ನಡೆಯಿತು. ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳು ಆಶೀರ್ವಚನ ನೀಡಿ,...