Friday, January 30, 2026

ನಂದನಹಿತ್ಲು ಅಮಂತ್ರಣ ಬಿಡುಗಡೆ

ಬಂಟ್ವಾಳ: ಚಿನ್ನದ ಪೇಟೆಯೆಂದೆ ಹೆಸರು ಪಡೆದಿರುವ ಬಂಟ್ವಾಳ ನಗರದ ಹೃದಯಭಾಗದಲ್ಲಿರುವ ನಂದನಹಿತ್ಲು ಶ್ರೀ ವೈದ್ಯನಾಥ, ಅರಸು ಜುಮಾದಿ ಬಂಟ ದೈವಸ್ಥಾನದ ಕಾಲಾವಧಿ ನೇಮೋತ್ಸವ ಹಾಗೂ ಶ್ರೀ ವೈದ್ಯನಾಥ ದೈವದ ಪಾಪೆಬಂಡಿ ಸಮರ್ಪಣೆಯ ಅಮಂತ್ರಣ ಪತ್ರವನ್ನು ಶ್ರೀ ಕ್ಷೇತ್ರದ ಅವರಣದಲ್ಲಿ ರವಿವಾರ ಬಿಡುಗಡೆಗೊಳಿಸಲಾಯಿತು.

ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರು ಅಮಂತ್ರಣ ಪತ್ರದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಾಳಿಗಾ ಮನೆತನದ ಸುಧೀರ್ ಬಾಳಿಗಾ ಬಂಟ್ವಾಳ, ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಕಾರ್ಯದರ್ಶಿ ಪ್ರಕಾಶ್ ಅಂಚನ್ , ಕೋಶಾಧಿಕಾರಿ ಲೋಕೇಶ್ ಬಂಗೇರ ಮಾಣಿ, ವಿಶ್ವನಾಥಪೂಜಾರಿ ಪೊನ್ನಂಗಿಲಗುತ್ತು, ಸಂಜೀವಪೂಜಾರಿ ಗಾಣದಪಡ್ಪು, ಲೋಕನಾಥ ಪೂಜಾರಿ ಬಡೆಕೊಟ್ಟು, ವೆಂಕಪ್ಪ ಪೂಜಾರಿ ಬಂಟ್ವಾಳ, ಗೋಪಾಲ ಸುವರ್ಣ, ಪುರಸಭಾ ಸದಸ್ಯೆ ದೇವಕಿ, ಶಶಿಧರ್ ಶೆಟ್ಟಿ, ದೇವದಾಸ, ಬಾಬು ಶೆಟ್ಟಿ, ಸೋಮಪ್ಪ ಪೂಜಾರಿ ಹೊಸ್ಮಾರ್ ಮೊದಲಾದವರು ಉಪಸ್ಥಿತರಿದ್ದರು.

ಪೂರ್ವ ಸಿದ್ದತಾ ಸಭೆ:  ಬಳಿಕ ಪಾಪೆ ಬಂಡಿ ಸಮರ್ಪಣೆಯ ಹಿನ್ನಲೆಯಲ್ಲಿ ಪೂರ್ವಸಿದ್ದತಾ ಸಭೆಯು ನಡೆಯಿತು. ಎ.1ರಿಂದ 3 ರ ವರೆಗೆ ಶ್ರೀ ಕ್ಷೇತ್ರದ ಕಾಲಾವಧಿ ಉತ್ಸವ ನಡೆಯಲಿದ್ದು, ಮಾ.30 ರಂದು ಪಾಪೆ ಬಂಡಿಯನ್ನು ಅದ್ದೂರಿಯ ಮೆರವಣಿಗೆಯಲ್ಲಿ ಶ್ರೀಕ್ಷೇತ್ರಕ್ಕೆ ತರಲು ನಿರ್ಧರಿಸಲಾಯಿತು.ಮಾ,30 ರಂದು ಸಂಜೆ ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಆಕರ್ಷಕ ಶೋಭಾಯಾತ್ರೆಯ ಮೂಲಕ ಹೊರಟು ಬಂಟ್ವಾಳ ಬೈಪಾಸ್ ರಸ್ತೆ , ಪೇಟೆಯಾಗಿ ಶ್ರೀಕ್ಷೇತ್ರಕ್ಕೆ ತಲುಪುದು, ಎ.1ರಂದು ಧಾರ್ಮಿಕ ವಿಧಿ ವಿಧಾನ ಪೂರೈಸಿ ಪಾಪೆ ಬಂಡಿಯನ್ನು ದೈವಕ್ಕೆ ಸಮರ್ಪಣೆಯ ಕಾರ್ಯ ನಡೆಯುವುದು ಎಂದು ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಸುವರ್ಣ ಸಭೆಗೆ ಮಾಹಿತಿ ನೀಡಿದರು. ಕಾರ್ಯದರ್ಶಿ ಪ್ರಕಾಶ್ ಅಂಚನ್ ಸ್ವಾಗತಿಸಿ, ವಂದಿಸಿದರು.

ದೈವ ಇಚ್ಚೆಯಂತೆ ಪಾಪೆಬಂಡಿ: ಶ್ರೀ ಕ್ಷೇತ್ರದ ದೈವದ ಅಪ್ಪಣೆಯಂತೆ ಪೇಟೆ ಸವಾರಿಗೆ ವಿಶೇಷವಾದ ಪಾಪೆ ಬಂಡಿ ನಿರ್ಮಿಸಲಾಗುತ್ತಿದೆ. ಸುಮಾರು 21ಲಕ್ಷ ರೂ. ವೆಚ್ಚದಲ್ಲಿ ಈ ಪಾಪೆ ಬಂಡೊಯನ್ನು ನಿರ್ಮಿಸಲಾಗುತ್ತಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...