Tuesday, February 11, 2025

ನಂದನಹಿತ್ಲು ಅಮಂತ್ರಣ ಬಿಡುಗಡೆ

ಬಂಟ್ವಾಳ: ಚಿನ್ನದ ಪೇಟೆಯೆಂದೆ ಹೆಸರು ಪಡೆದಿರುವ ಬಂಟ್ವಾಳ ನಗರದ ಹೃದಯಭಾಗದಲ್ಲಿರುವ ನಂದನಹಿತ್ಲು ಶ್ರೀ ವೈದ್ಯನಾಥ, ಅರಸು ಜುಮಾದಿ ಬಂಟ ದೈವಸ್ಥಾನದ ಕಾಲಾವಧಿ ನೇಮೋತ್ಸವ ಹಾಗೂ ಶ್ರೀ ವೈದ್ಯನಾಥ ದೈವದ ಪಾಪೆಬಂಡಿ ಸಮರ್ಪಣೆಯ ಅಮಂತ್ರಣ ಪತ್ರವನ್ನು ಶ್ರೀ ಕ್ಷೇತ್ರದ ಅವರಣದಲ್ಲಿ ರವಿವಾರ ಬಿಡುಗಡೆಗೊಳಿಸಲಾಯಿತು.

ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರು ಅಮಂತ್ರಣ ಪತ್ರದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಾಳಿಗಾ ಮನೆತನದ ಸುಧೀರ್ ಬಾಳಿಗಾ ಬಂಟ್ವಾಳ, ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಕಾರ್ಯದರ್ಶಿ ಪ್ರಕಾಶ್ ಅಂಚನ್ , ಕೋಶಾಧಿಕಾರಿ ಲೋಕೇಶ್ ಬಂಗೇರ ಮಾಣಿ, ವಿಶ್ವನಾಥಪೂಜಾರಿ ಪೊನ್ನಂಗಿಲಗುತ್ತು, ಸಂಜೀವಪೂಜಾರಿ ಗಾಣದಪಡ್ಪು, ಲೋಕನಾಥ ಪೂಜಾರಿ ಬಡೆಕೊಟ್ಟು, ವೆಂಕಪ್ಪ ಪೂಜಾರಿ ಬಂಟ್ವಾಳ, ಗೋಪಾಲ ಸುವರ್ಣ, ಪುರಸಭಾ ಸದಸ್ಯೆ ದೇವಕಿ, ಶಶಿಧರ್ ಶೆಟ್ಟಿ, ದೇವದಾಸ, ಬಾಬು ಶೆಟ್ಟಿ, ಸೋಮಪ್ಪ ಪೂಜಾರಿ ಹೊಸ್ಮಾರ್ ಮೊದಲಾದವರು ಉಪಸ್ಥಿತರಿದ್ದರು.

ಪೂರ್ವ ಸಿದ್ದತಾ ಸಭೆ:  ಬಳಿಕ ಪಾಪೆ ಬಂಡಿ ಸಮರ್ಪಣೆಯ ಹಿನ್ನಲೆಯಲ್ಲಿ ಪೂರ್ವಸಿದ್ದತಾ ಸಭೆಯು ನಡೆಯಿತು. ಎ.1ರಿಂದ 3 ರ ವರೆಗೆ ಶ್ರೀ ಕ್ಷೇತ್ರದ ಕಾಲಾವಧಿ ಉತ್ಸವ ನಡೆಯಲಿದ್ದು, ಮಾ.30 ರಂದು ಪಾಪೆ ಬಂಡಿಯನ್ನು ಅದ್ದೂರಿಯ ಮೆರವಣಿಗೆಯಲ್ಲಿ ಶ್ರೀಕ್ಷೇತ್ರಕ್ಕೆ ತರಲು ನಿರ್ಧರಿಸಲಾಯಿತು.ಮಾ,30 ರಂದು ಸಂಜೆ ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಆಕರ್ಷಕ ಶೋಭಾಯಾತ್ರೆಯ ಮೂಲಕ ಹೊರಟು ಬಂಟ್ವಾಳ ಬೈಪಾಸ್ ರಸ್ತೆ , ಪೇಟೆಯಾಗಿ ಶ್ರೀಕ್ಷೇತ್ರಕ್ಕೆ ತಲುಪುದು, ಎ.1ರಂದು ಧಾರ್ಮಿಕ ವಿಧಿ ವಿಧಾನ ಪೂರೈಸಿ ಪಾಪೆ ಬಂಡಿಯನ್ನು ದೈವಕ್ಕೆ ಸಮರ್ಪಣೆಯ ಕಾರ್ಯ ನಡೆಯುವುದು ಎಂದು ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಸುವರ್ಣ ಸಭೆಗೆ ಮಾಹಿತಿ ನೀಡಿದರು. ಕಾರ್ಯದರ್ಶಿ ಪ್ರಕಾಶ್ ಅಂಚನ್ ಸ್ವಾಗತಿಸಿ, ವಂದಿಸಿದರು.

ದೈವ ಇಚ್ಚೆಯಂತೆ ಪಾಪೆಬಂಡಿ: ಶ್ರೀ ಕ್ಷೇತ್ರದ ದೈವದ ಅಪ್ಪಣೆಯಂತೆ ಪೇಟೆ ಸವಾರಿಗೆ ವಿಶೇಷವಾದ ಪಾಪೆ ಬಂಡಿ ನಿರ್ಮಿಸಲಾಗುತ್ತಿದೆ. ಸುಮಾರು 21ಲಕ್ಷ ರೂ. ವೆಚ್ಚದಲ್ಲಿ ಈ ಪಾಪೆ ಬಂಡೊಯನ್ನು ನಿರ್ಮಿಸಲಾಗುತ್ತಿದೆ.

More from the blog

ಬಲ್ಲಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...