Thursday, June 26, 2025

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಜಯ

ಮುಂಬೈ: ಡೇವಿಡ್ ಮಿಲ್ಲರ್ ಅರ್ಧಶತಕ ಹಾಗೂ ಆಲ್ ರೌಂಡರ್ ಕ್ರಿಸ್ ಮೊರಿಸ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್‌ನ 7ನೇ ಪಂದ್ಯವನ್ನು 3 ವಿಕೆಟ್‌ಗಳಿಂದ ರೋಚಕ ಜಯ ದಾಖಲಿಸಿದೆ.

ಗೆಲ್ಲಲು 148 ರನ್ ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡ 19.4 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಔಟಾಗದೆ 36 ರನ್ (18 ಎಸೆತ, 4 ಬೌಂಡರಿ) ಗಳಿಸಿದ ಮೊರಿಸ್ ಸಿಕ್ಸರ್ ಸಿಡಿಸುವ ಮೂಲಕ ರಾಜಸ್ಥಾನಕ್ಕೆ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಗೆಲುವು ತಂದರು.

9.2 ಓವರ್‌ಗಳಲ್ಲಿ 42 ರನ್‌ಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿದ್ದ ರಾಜಸ್ಥಾನ ಸೋಲಿನ ಭೀತಿಯಲ್ಲಿತ್ತು. ಆಗ ತಂಡವನ್ನು ಆಧರಿಸಿದ ಮಿಲ್ಲರ್ (62, 43 ಎಸೆತ, 7 ಬೌಂಡರಿ, 2 ಸಿಕ್ಸರ್)ಹಾಗೂ ರಾಹುಲ್ ತೆವಾಟಿಯಾ (19, 17 ಎಸೆತ)6ನೇ ವಿಕೆಟಿಗೆ 48 ರನ್ ಜೊತೆಯಾಟ ನಡೆಸಿದರು. ತೆವಾಟಿಯಾ ಹಾಗೂ ಮಿಲ್ಲರ್ ಔಟಾದಾಗ ರಾಜಸ್ಥಾನದ ಸ್ಕೋರ್ 7ಕ್ಕೆ104 ರನ್.

ಕ್ರಿಸ್ ಮೋರಿಸ್ ಹಾಗೂ ಜೈದೇವ್ ಉನದ್ಕಟ್ 8ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 46 ರನ್ ಸೇರಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಡೆಲ್ಲಿಯ ಪರವಾಗಿ ಅವೇಶ್ ಖಾನ್ (3-32), ಕ್ರಿಸ್ ವೋಕ್ಸ್(2-22) ಹಾಗೂ ಕಾಗಿಸೊ ರಬಾಡ(2-30)7 ವಿಕೆಟ್ ಹಂಚಿಕೊAಡರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಯಕ ರಿಷಭ್ ಪಂತ್ ಅರ್ಧಶತಕದ ಕೊಡುಗೆ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್‌ಗಳಿಸಿದೆ.

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...