Thursday, February 13, 2025

ಬಂಟ್ವಾಳ: ಚಲನಚಿತ್ರದ ನಿರ್ಮಾಪಕನಿಂದ ಇಫ್ತಾರ್ ಕೂಟ

ಬಂಟ್ವಾಳ, ಜೂ. ೧: ಬಂಟ್ವಾಳದಲ್ಲಿ ಸೌಹಾರ್ದವನ್ನು ಸಾರುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿದ್ದು, ಇಲ್ಲಿನ ಬಹುಸಂಖ್ಯಾತರು ಮತ್ತು ಕ್ರೈಸ್ತ ಸಮುದಾಯದ ಜನ ಕೋಮು ಸಾಮರಸ್ಯವನ್ನು ಬಯಸುವವರೇ ಎಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ.
ಬಂಟ್ವಾಳ ತಾಲೂಕಿನ ಕೊಳಕೆ ನಿವಾಸಿ, “ಕಂಬಳಬೆಟ್ಟು ಭಟ್ರೆನ ಮಗಳು” ಚಲನಚಿತ್ರದ ನಿರ್ಮಾಪಕ ರೊನಾಲ್ಡೊ ಮಾರ್ಟಿಸ್ ಅವರು ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ.
ಮೇ ೩೧ರಂದು ಕೊಳಕೆಯ ಮುಹಿಯುದ್ದಿನ್ ಜುಮಾ ಮಸೀದಿಯಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಿದ್ದಲ್ಲದೆ, ತನ್ನ ಸ್ನೇಹಿತರೊಂದಿಗೆ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಸಹಕರಿಸಿದರು. ಈ ಸಂದರ್ಭದಲ್ಲಿ ಕೊಳಕೆ ಜಮಾಅತ್‌ನ ಸುಮಾರು ೨೦೦ ಮಂದಿ ಮಸೀದಿಯಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ಉಪವಾಸ ತೊರೆದು ಸಾಕ್ಷಿಯಾದರು.
ಬಂಟ್ವಾಳ ತಾಲೂಕಿನ ಕೋಡಪದವು, ವಿಟ್ಲ, ಬೊಳ್ಳಾಯಿ, ಕಲ್ಲಡದಕ, ಇರಾ ಹೀಗೆ..ವಿವಿಧ ಕಡೆಗಳಲ್ಲಿ ಊರಿನ ಮುಸ್ಲಿಂ ಬಾಂಧವರಿಗೆ ವಿಶೇಷ ಇಫ್ತಾರ್ ಕೂಟ ಏರ್ಪಡಿಸಿ ಮಾನವೀಯತೆಗಿಂತ ಮಿಗಿಲಾದುದು ಯಾವುದೂ ಇಲ್ಲ ಎಂಬುದನ್ನು ಸಮಾಜಕ್ಕೆ ಸಾರಿದ್ದಾರೆ. ಜಿಲ್ಲೆಯಲ್ಲಿ ರಾಜಕೀಯ ಕಾರಣಕ್ಕಾಗಿ ಮಾತ್ರ ಸಂಘರ್ಷಗಳು ನಡೆಯುತ್ತಿವೆಯೇ ಹೊರತು ಜನರ ಮಧ್ಯೆ ಯಾವುದೇ ತಾರತಮ್ಯ ಇಲ್ಲ ಎಂಬುದನ್ನು ಇಂತಹ ಸೌಹಾರ್ದ ಕಾರ್ಯಕ್ರಮಗಳು ಸಾರಿ ಹೇಳುತ್ತಿವೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...