Wednesday, February 12, 2025

ಅಣ್ಣ ತಂಗಿಯ ಸಾಧನೆ ಐರಿಸ್ ರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಪ್ರಬಂದ ಮಂಡನೆ

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಂಚಯಗಿರಿಯ ಅಣ್ಣ-ತಂಗಿ ವಿದ್ಯಾರ್ಥಿಗಳಿಬ್ಬರು ಐರಿಸ್ ರಾಷ್ಟ್ರೀಯ ವಿಜ್ಞಾನ ಮೇಳ ೨೦೨೦ ಇದರಲ್ಲಿ ಭಾಗವಹಿಸಿ ಪ್ರಶಂಸಾ ಪತ್ರ ಪಡೆದಿದ್ದಾರೆ.
ಮೊಡಂಕಾಪು ಇನೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ
ವರ್ಷಾ ಡಿ. ಗೌಡ ಹಾಗೂ ಮಂಗಳೂರು, ಕೋಡಿಯಾಲ್‌ಬಲ್ ಶಾರದಾ ಪಿ. ಯು. ಕಾಲೇಜ್‌ನಲ್ಲಿ
ಪ್ರಥಮ ಪಿ.ಯು. ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿ ವೈಶಾಖ್ ಡಿ. ಗೌಡ ಅವರು ಬೆಂಗಳೂರು ಪಾಲನಾ ಭವನದಲ್ಲಿ ಜ.೨೨ರಿಂದ ಜ.೨೪ ರವರೆಗೆ ನಡೆದ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ಪ್ರಬಂಧ ಮಂಡಿಸಿದ್ದರು. ಇವರು ಮಂಡಿಸಿದ ಇರಾಡಿಕೇಟ್ ಒಬೇಸಿಟಿ (ಬೊಜ್ಜುತನ ನಿವಾರಣೆ) ವಿಷಯದ ಪ್ರಬಂಧ ನಿರ್ಣಾಯಕರ ಪ್ರಶಂಸೆಗೆ ಪಾತ್ರವಾಗಿದೆ.
ಇವರಿಗೆ ಇನೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ವಿಜ್ಞಾನ ಶಿಕ್ಷಕ ಕಿಶೋರ್ ಸುವರ್ಣ ಅವರು ಮಾರ್ಗದರ್ಶನ ನೀಡಿದ್ದಾರೆ. ಇವರು ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ದಾಮೋದರ ಗೌಡ ಕೆ. ಎಂ. ಮತ್ತು ಕೊಯಿಲ ಸರಕಾರಿ ಪ್ರೌಢ ಶಾಲಾ ಶಿಕ್ಷಕಿ ನಿವೇದಿತಾ ಕೆ.ಕೆ.ಅವರ ಮಕ್ಕಳು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...