Tuesday, July 1, 2025

’ಸುಸಂಸ್ಕೃತರ ಒಡನಾಟದಿಂದ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಬಹುದು’- ತುಂಗಪ್ಪ ಬಂಗೇರ

ವಿಟ್ಲ: ಮಕ್ಕಳ ಭವಿಷ್ಯತ್ತಿಗೆ ಬಡಜನರ ಕಷ್ಟ ಸುಖಗಳಿಗೆ ನಿರಂತರ ಸ್ಪಂದಿಸುವ ಮಾದರಿ ಸಂಘಟನೆಗಳಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ನಮ್ಮೆಲ್ಲರ ಮಧ್ಯೆ ಗುರುತಿಸಿಕೊಂಡಿದೆ. ವಿಕಾಸ ವಾಹಿನಿ ಸ್ವ-ಸಹಾಯ ಸಂಘಗಳು, ಘಟಸಮಿತಿ ಮುಖಾಂತರ ಸಾಮಾಜಿಕ ಸೇವಾ ಕಾರ್‍ಯಗಳು ನಡೆಯುತ್ತಿವೆ. ಸುಸಂಸ್ಕೃತರ ಒಡನಾಟದಿಂದ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಬಹುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ತಿಳಿಸಿದರು.
ಅವರು ಒಡಿಯೂರು ಶ್ರೀಗಳ ಜನ್ಮದಿನೋತ್ಸವದ ಅಂಗವಾಗಿ ಇರ್ವತ್ತೂರು ಘಟ ಸಮಿತಿ ವತಿಯಿಂದ ಮೂಡಪಡುಕೋಡಿ ಸರಕಾರಿ ಹಿರಿಯ ಪ್ರಥಮಿಕ ಶಾಲೆಯ ರಂಗಮಂದಿರದಲ್ಲಿ ನಡೆದ ಪುಸ್ತಕ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ಪ್ರಸ್ತಾವನೆಗೈದು ಪೂಜ್ಯ ಶ್ರೀಗಳ ಜನ್ಮದಿನೋತ್ಸವ ಗ್ರಾಮೋತ್ಸವ ಆಚಾರಣೆಯ ಉದ್ದೇಶಗಳನ್ನು ತಿಳಿಸಿದರು. ಈ ಸಂದರ್ಭ 60ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಹಾಫ್ ಕಾಮ್ಸ್ ಮಂಗಳೂರು ಇದರ ಅಧ್ಯಕ್ಷ ಕೆ. ಲಕ್ಷ್ಮೀ ನಾರಾಯಣ ಉಡುಪ, ಧನ್ವಂತರಿ ಕ್ಲಿನಿಕ್ ಡಾ. ರಾಮಕೃಷ್ಣ ಎಸ್, ಇರ್ವತ್ತೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷರಾದ ಶಂಕರಶೆಟ್ಟಿ ಬೆದ್ರಮಾರ್, ಸದಸ್ಯರಾದ ಸುಧೀರ್ ಶೆಟ್ಟಿ ಎರ್ಮೆನಾಡು, ದಯಾನಂದ ಕುಲಾಲ್, ಎಸ್.ಡಿ.ಎಮ್.ಸಿ ಇದರ ಅಧ್ಯಕ್ಷರಾದ ಶ್ರೀನಿವಾಸ, ಶಾಲಾ ಸಹ ಶಿಕ್ಷಕರಾದ ಸುನೀಲ್ ಸಿಕ್ವೇರಾ, ದಲಿತ ಸಂಘಟನಾ ಸಮಿತಿ ನೇರಳಕಟ್ಟೆ ಇದರ ಅಧ್ಯಕ್ಷರಾದ ಸುಂದರ್ ಸಾಲ್ಯನ್, ಶ್ರೀದುರ್ಗಾ ಫ್ರೆಂಡ್ಸ್ ಕಲ್ಲಡ್ಕ ಇದರ ಅಧ್ಯಕ್ಷರಾದ ರಮೇಶ್, ಶಿವಾಜಿ ಫ್ರೆಂಡ್ಸ್ ಇರ್ವತ್ತೂರು ಇದರ ಸದಸ್ಯರಾದ ದಯಾನಂದ, ಚೆನ್ನೈತ್ತೋಡಿ ಘಟ ಸಮಿತಿ ಅಧ್ಯಕ್ಷರಾದ ಹರೀಶ್, ಪಿಲಾತಬೆಟ್ಟು ಘಟ ಸಮಿತಿ ಅಧ್ಯಕ್ಷರಾದ ಮೋಹನ್ ಸಾಲ್ಯಾನ್, ಇರ್ವತ್ತೂರು ಘಟ ಸಮಿತಿ ಅಧ್ಯಕ್ಷರಾದ ಗಂಗಯ್ಯ ಡಿ.ಎನ್, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ನಿರ್ದೇಶಕರಾದ ಕಿರಣ್ ಉರ್ವ, ಸಂಯೋಜಕಿ ಜಯಶ್ರೀಯವರು ಉಪಸ್ಥಿತರಿದ್ದರು.
ಜತೆ ಕಾರ್‍ಯದರ್ಶಿ ಮೋಹಿನಿ ಆಶಯ ಗೀತೆ ಹಾಡಿದರು. ಘಟ ಸಮಿತಿ ಸಂಘಟನಾ ಕಾರ್‍ಯದರ್ಶಿ ಸುಧಾಕರ ಸ್ವಾಗತಿಸಿದರು. ಕಾರ್‍ಯದರ್ಶಿ ಶೇಖರ್ ವಂದಿಸಿದರು. ಗ್ರಾಮದ ಸೇವಾದೀಕ್ಷಿತೆ ವಿಜಯ ಕಾರ್‍ಯಕ್ರಮ ನಿರೂಪಿಸಿದರು. ಸೇವಾದೀಕ್ಷಿತೆ ಪುಷ್ಪಾವತಿ, ಘಟಸಮಿತಿ ಪದಾಧಿಕಾರಿಗಳು, ಗುಂಪಿನ ಸದಸ್ಯರು ಸಹಕರಿಸಿದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...