ಬಂಟ್ವಾಳ: ಸಜೀಪಮೂಡ ಗ್ರಾಮ ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನದ ಚತುರ್ಥ ಪುನಃಪ್ರತಿಷ್ಠಾಪನೆ ವಾರ್ಷಿಕೋತ್ಸವ ಹಾಗೂ ವರ್ಷವಧಿ ಜಾತ್ರಾಮಹೋತ್ಸವ ಪೂರ್ವಭಾವಿ ಸಭೆ ಉತ್ಸವ ಸಮಿತಿ ಅಧ್ಯಕ್ಷರು ಹಾಗೂ ದ.ಕ.ಜಿ.ಪ. ಮಾಜಿ ಅಧ್ಯಕ್ಷ ಬಿ. ಸದಾನಂದ ಪೂಂಜ ಅಧ್ಯಕ್ಷತೆಯಲ್ಲಿ ಜರಗಿತು.

ಮಾ. 11 ಬುಧವಾರದಂದು ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ಈಚಿಲ್ ತಾಯ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿಸಲು ತೀರ್ಮಾನಿಸಲಾಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಕ್ಷೇತ್ರದ ಶಾಸಕ ಯು. ರಾಜೇಶ್ ನಾಯಕ್, ಮಾಜಿ ಸಚಿವ ಬಿ. ರಮಾನಾಥ ರೈ ಮೊದಲಾದ ಗಣ್ಯರ ಉಪಸ್ಥಿತಿಯಲ್ಲಿ ಜರಗಿಸಲು ತೀರ್ಮಾನಿಸಲಾಯಿತು.
ವಿವಿಧ ತಂಡಗಳಿಂದ ನಾಮಸಂಕೀರ್ತನೆ, ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ನೆರವೇರಿಸಲು ತೀರ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪೌರಾಣಿಕ ನಾಟಕ ಪ್ರದರ್ಶಿಸಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.
ಸಭೆಯಲ್ಲಿ ಪ್ರಮುಖರಾದ ಸಜೀಪಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ್ ಬೆಲ್ಚಡ, ಕೋಡೂರು ಪಂಚಾಯತ್ ಮಾಜಿ ಅಧ್ಯಕ್ಷ ಬಿ. ದೇವಿಪ್ರಸಾದ್ ಪೂಂಜ, ಎಸ್. ಪದ್ಮನಾಭ ಕೊಟ್ಟಾರಿ, ಚಂದ್ರಹಾಸ, ವಾಸು ಗಟ್ಟಿ, ರಮೇಶ ಅನ್ನಪ್ಪಾಡಿ, ರವಿ ಪಂಬದ, ಕುಸುಮ ಕಸ್ತೂರಿ, ವಿಷ್ಣುಮೂರ್ತಿ ಮಯ್ಯ, ಕೆ. ಸದಾನಂದ ಶೆಟ್ಟಿ, ಪದ್ಮನಾಭ ಪೆರ್ವ, ರಾಕೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.