Tuesday, January 27, 2026

ಅನುಪಮಾಕಾಮತ್ ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ

ಬಂಟ್ವಾಳ: ತಂದೆ ತಾಯಿ‌ಇಬ್ಬರೂ ಡಾಕ್ಟರ್ ಆದರೆ ನನಗೆ ಡಾಕ್ಟರ್ ಆಗುವ ಆಸಕ್ತಿ ಇಲ್ಲ. ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ ಎಂದು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾದ ಬಂಟ್ವಾಳ ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಕಾಮತ್ ಹೇಳಿದಳು.
ಈ ಫಲಿತಾಂಶ ನನಗೆ ಖುಷಿ ತಂದಿದೆ.


ಇದಕ್ಕೆ ತಂದೆ ತಾಯಿ ಯ ಶ್ರಮ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಇದೆ, ಜೊತೆಗೆ ಶಾಲಾ ಶಿಕ್ಷಕರ ಹಾಗೂ ಸ್ನೇಹಿತರ ಸಹಕಾರದಿಂದ ಇದು ಸಾಧ್ಯವಾಯಿತು ಎಂದು ಅವಳು ಹೇಳಿದ್ದಾಳೆ.

ನನ್ನ ತಾಯಿಯ ತಂದೆ ಇಸ್ರೋದಲ್ಲಿದ್ದವರು. ನನಗೂ ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ. ಪಿಸಿಎಂಬಿ ತೆಗೆದುಕೊಂಡು ಶಾರದಾ ವಿದ್ಯಾಲಯಲದಲ್ಲಿ ಪಿಯುಸಿ ವಿಜ್ಞಾನ ವಿಷಯ ಆಯ್ಕೆ ಮಾಡುವೆ ಎಂದು ಹೇಳಿದಳು.
ಅವರ ಪ್ರಥಮ ಪುತ್ರಿ ಅನುಪಮಾ ನೃತ್ಯ, ಸಂಗೀತ ಸಹಿತ ಪಠ್ಯೇತರ ಚಟುವಟಿಕೆಗಳಲ್ಲೂ ಮುಂದಿದ್ದಾಳೆ. ಸದ್ಯ ಮಂಗಳೂರಿನ ಸಿಎಫ್‌ಎಎಲ್ ನಲ್ಲಿ ಐಐಟಿ ಕೋಚಿಂಗ್ ಪಡೆಯುತ್ತಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ.
ಶಾಲೆಯ ಎಲ್ಲ ಶಿಕ್ಷಕ ವೃಂದ ಮತ್ತು ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ. ಶಾಲೆಯಲ್ಲಿ ಕೊಡುವ ಕೋಚಿಂಗ್ ಅಷ್ಟೇ ನನಗೆ ಮಾರ್ಗದರ್ಶಿ. ನನ್ನ ಸಹಪಾಠಿಗಳೊಂದಿಗೆ ಗ್ರೂಪ್ ಸ್ಟಡಿ ಮಾಡ್ತಿದ್ದೆ. ನನ್ನೊಡನೆ ಗ್ರೂಪ್ ಸ್ಟಡಿ ಮಾಡುತ್ತಿದ್ದ ಎಲ್ಲರಿಗೂ ಉತ್ತಮ ಅಂಕ ಬಂದಿವೆ ಎಂದು ತಿಳಿಸಿದ್ದಾಳೆ
ಕೈಕುಂಜೆಯಲ್ಲಿ ಮನೆ ಮಾಡಿರುವ ವೈದ್ಯ ದಂಪತಿ ಡಾ. ದಿನೇಶ್ ಕಾಮತ್ ಮತ್ತು ಡಾ.ಅನುರಾಧಾ ಕಾಮತ್ ಅವರ ಪುತ್ರಿ.
ಇವಳ ತಾಯಿ ಅನುರಾಧ ಕಾಮತ್ ಅವರು ಕೂಡಾ ರಾಜ್ಯಕ್ಕೆ ಏಳನೇ ಸ್ಥಾನವನ್ನು ಅಂದು ಎಸ್.ಎಸ್.ಎಲ್.ಸಿ.ಯಲ್ಲಿ ಪಡೆದುಕೊಂಡ ಬಗ್ಗೆ ಮಾಧ್ಯಮವರ ಬಳಿ ನೆನೆಪಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...