Wednesday, July 9, 2025

ಅನುಪಮಾಕಾಮತ್ ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ

ಬಂಟ್ವಾಳ: ತಂದೆ ತಾಯಿ‌ಇಬ್ಬರೂ ಡಾಕ್ಟರ್ ಆದರೆ ನನಗೆ ಡಾಕ್ಟರ್ ಆಗುವ ಆಸಕ್ತಿ ಇಲ್ಲ. ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ ಎಂದು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾದ ಬಂಟ್ವಾಳ ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಕಾಮತ್ ಹೇಳಿದಳು.
ಈ ಫಲಿತಾಂಶ ನನಗೆ ಖುಷಿ ತಂದಿದೆ.


ಇದಕ್ಕೆ ತಂದೆ ತಾಯಿ ಯ ಶ್ರಮ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಇದೆ, ಜೊತೆಗೆ ಶಾಲಾ ಶಿಕ್ಷಕರ ಹಾಗೂ ಸ್ನೇಹಿತರ ಸಹಕಾರದಿಂದ ಇದು ಸಾಧ್ಯವಾಯಿತು ಎಂದು ಅವಳು ಹೇಳಿದ್ದಾಳೆ.

ನನ್ನ ತಾಯಿಯ ತಂದೆ ಇಸ್ರೋದಲ್ಲಿದ್ದವರು. ನನಗೂ ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ. ಪಿಸಿಎಂಬಿ ತೆಗೆದುಕೊಂಡು ಶಾರದಾ ವಿದ್ಯಾಲಯಲದಲ್ಲಿ ಪಿಯುಸಿ ವಿಜ್ಞಾನ ವಿಷಯ ಆಯ್ಕೆ ಮಾಡುವೆ ಎಂದು ಹೇಳಿದಳು.
ಅವರ ಪ್ರಥಮ ಪುತ್ರಿ ಅನುಪಮಾ ನೃತ್ಯ, ಸಂಗೀತ ಸಹಿತ ಪಠ್ಯೇತರ ಚಟುವಟಿಕೆಗಳಲ್ಲೂ ಮುಂದಿದ್ದಾಳೆ. ಸದ್ಯ ಮಂಗಳೂರಿನ ಸಿಎಫ್‌ಎಎಲ್ ನಲ್ಲಿ ಐಐಟಿ ಕೋಚಿಂಗ್ ಪಡೆಯುತ್ತಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ.
ಶಾಲೆಯ ಎಲ್ಲ ಶಿಕ್ಷಕ ವೃಂದ ಮತ್ತು ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ. ಶಾಲೆಯಲ್ಲಿ ಕೊಡುವ ಕೋಚಿಂಗ್ ಅಷ್ಟೇ ನನಗೆ ಮಾರ್ಗದರ್ಶಿ. ನನ್ನ ಸಹಪಾಠಿಗಳೊಂದಿಗೆ ಗ್ರೂಪ್ ಸ್ಟಡಿ ಮಾಡ್ತಿದ್ದೆ. ನನ್ನೊಡನೆ ಗ್ರೂಪ್ ಸ್ಟಡಿ ಮಾಡುತ್ತಿದ್ದ ಎಲ್ಲರಿಗೂ ಉತ್ತಮ ಅಂಕ ಬಂದಿವೆ ಎಂದು ತಿಳಿಸಿದ್ದಾಳೆ
ಕೈಕುಂಜೆಯಲ್ಲಿ ಮನೆ ಮಾಡಿರುವ ವೈದ್ಯ ದಂಪತಿ ಡಾ. ದಿನೇಶ್ ಕಾಮತ್ ಮತ್ತು ಡಾ.ಅನುರಾಧಾ ಕಾಮತ್ ಅವರ ಪುತ್ರಿ.
ಇವಳ ತಾಯಿ ಅನುರಾಧ ಕಾಮತ್ ಅವರು ಕೂಡಾ ರಾಜ್ಯಕ್ಕೆ ಏಳನೇ ಸ್ಥಾನವನ್ನು ಅಂದು ಎಸ್.ಎಸ್.ಎಲ್.ಸಿ.ಯಲ್ಲಿ ಪಡೆದುಕೊಂಡ ಬಗ್ಗೆ ಮಾಧ್ಯಮವರ ಬಳಿ ನೆನೆಪಿಸಿದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...