Wednesday, February 12, 2025

ಅನುಪಮಾಕಾಮತ್ ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ

ಬಂಟ್ವಾಳ: ತಂದೆ ತಾಯಿ‌ಇಬ್ಬರೂ ಡಾಕ್ಟರ್ ಆದರೆ ನನಗೆ ಡಾಕ್ಟರ್ ಆಗುವ ಆಸಕ್ತಿ ಇಲ್ಲ. ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ ಎಂದು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾದ ಬಂಟ್ವಾಳ ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಕಾಮತ್ ಹೇಳಿದಳು.
ಈ ಫಲಿತಾಂಶ ನನಗೆ ಖುಷಿ ತಂದಿದೆ.


ಇದಕ್ಕೆ ತಂದೆ ತಾಯಿ ಯ ಶ್ರಮ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಇದೆ, ಜೊತೆಗೆ ಶಾಲಾ ಶಿಕ್ಷಕರ ಹಾಗೂ ಸ್ನೇಹಿತರ ಸಹಕಾರದಿಂದ ಇದು ಸಾಧ್ಯವಾಯಿತು ಎಂದು ಅವಳು ಹೇಳಿದ್ದಾಳೆ.

ನನ್ನ ತಾಯಿಯ ತಂದೆ ಇಸ್ರೋದಲ್ಲಿದ್ದವರು. ನನಗೂ ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ. ಪಿಸಿಎಂಬಿ ತೆಗೆದುಕೊಂಡು ಶಾರದಾ ವಿದ್ಯಾಲಯಲದಲ್ಲಿ ಪಿಯುಸಿ ವಿಜ್ಞಾನ ವಿಷಯ ಆಯ್ಕೆ ಮಾಡುವೆ ಎಂದು ಹೇಳಿದಳು.
ಅವರ ಪ್ರಥಮ ಪುತ್ರಿ ಅನುಪಮಾ ನೃತ್ಯ, ಸಂಗೀತ ಸಹಿತ ಪಠ್ಯೇತರ ಚಟುವಟಿಕೆಗಳಲ್ಲೂ ಮುಂದಿದ್ದಾಳೆ. ಸದ್ಯ ಮಂಗಳೂರಿನ ಸಿಎಫ್‌ಎಎಲ್ ನಲ್ಲಿ ಐಐಟಿ ಕೋಚಿಂಗ್ ಪಡೆಯುತ್ತಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ.
ಶಾಲೆಯ ಎಲ್ಲ ಶಿಕ್ಷಕ ವೃಂದ ಮತ್ತು ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ. ಶಾಲೆಯಲ್ಲಿ ಕೊಡುವ ಕೋಚಿಂಗ್ ಅಷ್ಟೇ ನನಗೆ ಮಾರ್ಗದರ್ಶಿ. ನನ್ನ ಸಹಪಾಠಿಗಳೊಂದಿಗೆ ಗ್ರೂಪ್ ಸ್ಟಡಿ ಮಾಡ್ತಿದ್ದೆ. ನನ್ನೊಡನೆ ಗ್ರೂಪ್ ಸ್ಟಡಿ ಮಾಡುತ್ತಿದ್ದ ಎಲ್ಲರಿಗೂ ಉತ್ತಮ ಅಂಕ ಬಂದಿವೆ ಎಂದು ತಿಳಿಸಿದ್ದಾಳೆ
ಕೈಕುಂಜೆಯಲ್ಲಿ ಮನೆ ಮಾಡಿರುವ ವೈದ್ಯ ದಂಪತಿ ಡಾ. ದಿನೇಶ್ ಕಾಮತ್ ಮತ್ತು ಡಾ.ಅನುರಾಧಾ ಕಾಮತ್ ಅವರ ಪುತ್ರಿ.
ಇವಳ ತಾಯಿ ಅನುರಾಧ ಕಾಮತ್ ಅವರು ಕೂಡಾ ರಾಜ್ಯಕ್ಕೆ ಏಳನೇ ಸ್ಥಾನವನ್ನು ಅಂದು ಎಸ್.ಎಸ್.ಎಲ್.ಸಿ.ಯಲ್ಲಿ ಪಡೆದುಕೊಂಡ ಬಗ್ಗೆ ಮಾಧ್ಯಮವರ ಬಳಿ ನೆನೆಪಿಸಿದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...