Monday, February 10, 2025

ಹಿಂದೂ ಜಾಗರಣ ವೇದಿಕೆ ಬಂಟ್ವಾಳ ಅವರ ವತಿಯಿಂದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನುಡಿನಮನ

ಬಂಟ್ವಾಳ, ಫೆ. ೧೫: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ
ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ಅವರ ವತಿಯಿಂದ ರಾತ್ರಿ 7.00 ಗಂಟೆಗೆ ನುಡಿನಮನ ಕಾರ್ಯಕ್ರಮ ನಡೆಯಿತು.


ಘಟನೆಯನ್ನು ಖಂಡಿಸಿ ಮೌನಪ್ರಾರ್ಥನೆ ಸಲ್ಲಿಸಲಾಯಿತು. ‌ಬಳಿಕ ವೀರಯೋಧರ ಭಾವಚಿತ್ರ ಕ್ಕೆ ಪುಷ್ಪಾಂರ್ಚನೆ ಮಾಡಿದರು.‌

ಬಳಿಕ ಮಾತನಾಡಿದ ಸತ್ಯಜಿತ್ ಸುರತ್ಕಲ್ ಮಾತನಾಡಿ
ದೇಶ ಕಾಯುವ ನಮ್ಮ ವೀರ ಸೈನಿಕರು ಹೇಡಿ ಉಗ್ರರ ದಾಳಿಗೆ ಬಲಿಯಾದ ಕ್ಷಣ ಇಡೀ ದೇಶದ ಜನತೆಯನ್ನು ಕಣ್ಣೀರು ಹಾಕುವಂತೆ ಮಾಡಿದೆ.
ಪ್ರತಿಯೊಬ್ಬ ಸೈನಿಕರ ಬಲಿದಾನವು ನಮಗೆ ನೋವು ತಂದಿದೆ.
ಮಾನವ ಹಕ್ಕುಗಳ ಹೆಸರಿನಲ್ಲಿ ಸೈನಿಕರ ಮೇಲೆ ಆಕ್ರಮಣ, ಕೆಲವು ರಾಜಕೀಯ ಪಕ್ಷಗಳ ತೊಂದರೆ , ಪ್ರತಿಕೂಲ ಪರಿಸ್ಥಿತಿ ಯ ಜೊತೆ ಹೋರಾಟ ಇವೆಲ್ಲವುಗಳ ಮಧ್ಯೆ ದೇಶ ರಕ್ಷಣೆ ಮಾಡುವ ಸೈನಿಕರ ಬಗ್ಗೆ ನಾವು ಒಂದು ದಿನವೂ ಯೋಚನೆ ಮಾಡಿಲ್ಲ, ಅವರ ಕುಟುಂಬದ ಸ್ಥಿತಿ ಯನ್ನು ನೋಡಿಲ್ಲ.
ದೇಶದ ರಕ್ಷಣೆ ಗೋಸ್ಕರ ಪ್ರತಿಕ್ಷಣವೂ ತುಡಿತದಲ್ಲಿರುವ ಸೈನಿಕರಿಗೆ ಶಕ್ತಿತುಂಬುವ ಕೆಲಸ ನಾವೆಲ್ಲ ರೂ ಮಾಡಬೇಕಾಗಿದೆ.
ದೇಶದ್ರೋಹಿಗಳಿಗೆ ಆಶ್ರಯ ನೀಡುವ ಭಯೋತ್ಪಾದಕ ರು ನಮ್ಮ ನೆರೆಹೊರೆಯಲ್ಲಿದ್ದಾರೆ ಎಂಬುದು ವಿಷಾದನೀಯ ಎಂದರು.‌ ಇಡೀ ಜಗತ್ತಿಗೆ ಬೇರೆ ಬೇರೆ ಹೆಸರಿನಲ್ಲಿ ಭಯೋತ್ಪಾದಕ ಹೆಸರಿನ ಲ್ಲಿ ಇಸ್ಲಾಮೀ ಕರಣ ಮಾಡಲು ಕೆಲಸ ಮಾಡುತ್ತಿದೆ .
ಜವಬ್ದಾರಿ ನಾಗರೀಕರಾಗಿ ನಾವು ದೇಶ ದ್ರೋಹಿಗಳ ವಿರುದ್ದ ಹೋರಾಟ ಮಾಡಬೇಕಾಗಿದೆ ಎಂದು ಅವರು ಹೇಳಿದರು.
ಪ್ರಮುಖರಾದ ರಾಧಾಕೃಷ್ಣ ಅಡ್ಯಂತಾಯ, ರವಿರಾಜ್ ಬಿಸಿರೋಡ್, ಚಂದ್ರಕಲಾಯಿ, ರತ್ನಾಕರ ಶೆಟ್ಟಿ, ಮಚ್ಚೇಂದ್ರ ಸಾಲಿಯಾನ್, ಶೇಖರ್ ಶೆಟ್ಟಿ, ಯೋಗೀಶ್ ತುಂಬೆ ಮತ್ತಿತರ ರು ಉಪಸ್ಥಿತರಿದ್ದರು.

More from the blog

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳಿಂದ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ...

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಡೆಯಿತು ಪೂರ್ವಭಾವಿ ಸಭೆ

ಬಂಟ್ವಾಳ:  ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಇಲ್ಲಿ ನಡೆಯುವ ಶತಚಂಡಿಕಯಾಗದ ಹಾಗೂ ಕುಪ್ಪೆಟ್ಟು ಬರ್ಕೆ ಕರ್ಪೆ ಪ್ರತಿಷ್ಠಾ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಕಡೆಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...