Wednesday, July 9, 2025

ಜೈನ್ ಮಿಲನ್ ಬಂಟ್ವಾಳ ಮಾಸಿಕ ಸಭೆ – ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬಂಟ್ವಾಳ: ಭಾರತೀಯ ಜೈನ್ ಮಿಲನ್ ನ ಶಾಖೆ, ಬಂಟ್ವಾಳ ಜೈನ್ ಮಿಲನ್ ನ ಸಪ್ಟೆಂಬರ್ ತಿಂಗಳ ಮಾಸಿಕ ಸಭೆಯು ಪಾಣೆಮಂಗಳೂರು ಶ್ರೀ ಅನಂತನಾಥ ತೀರ್ಥಂಕರ ಜಿನ ಚೈತ್ಯಾಲಯದಲ್ಲಿ ದಿನಾಂಕ 10.09.2021 ರಂದು ನಡೆಯಿತು.

ಪ್ರತಿ ವರ್ಷದಂತೆ ಸೋಣ ತಿಂಗಳ ಕೊನೆಯ ಶುಕ್ರವಾರದಂದು ಮದಿಮೆತ್ತಿಮಾರು ನಮಿರಾಜ್ ಜೈನ್ ಕುಟುಂಬಿಕರ ಆತಿಥ್ಯದಲ್ಲಿ ಮಾಸಿಕ ಸಭೆ ನಡೆಯಿತು.

ಮಿಲನ್ ಅಧ್ಯಕ್ಷ ವೀರ್ ಡಾ. ಸುದೀಪ್ ಕುಮಾರ್ ಪ್ರಸ್ತಾವನೆಯೊಂದಿಗೆ ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಪ್ರತಿ ವರ್ಷದಂತೆ SSLC ಹಾಗೂ PUC ಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ಜೈನ್ ಮಿಲನ್ ನ ಎಲ್ಲಾ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಯಿತು. ವೀರ್ ಹರ್ಷರಾಜ್ ಸಮಾರಂಭದ ಮುಖ್ಯ ಅತಿಥಿ ವೀರ್ ಫ್ರೊ.ವೃಷಭರಾಜ್ ಜೈನ್ ರವರನ್ನು ಪರಿಚಯಿಸಿದರು.

ಮುಖ್ಯ ಅತಿಥಿ ವೀರ್ ವೃಷಭರಾಜ್ ತಮ್ಮ ಅತಿಥಿ ಭಾಷಣದಲ್ಲಿ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಅಭಿನಂದಿಸಿದರು. ಇಂದಿನ ವಾಸ್ತವಿಕ ದಿನಮಾನದಲ್ಲಿ ವಿದ್ಯಾರ್ಥಿಗಳು ತಾವು ಪಡೆಯುವ ಅಂಕಗಳಿಗೆ ಕೇವಲ 20℅ಮೌಲ್ಯವಿರುತ್ತದೆ(IQ ), ಉಳಿದಂತೆ 70℅ ಸಾಮಾಜಿಕ ಜೀವನ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳುತ್ತಾರೆ(EQ), ಹಾಗೂ 10℅ ಆಧ್ಯಾತ್ಮಿಕ ಮತ್ತು ಧಾರ್ಮಿಕ ಮೌಲ್ಯಗಳಿಗೆ (SQ) ಎಂಬುದಾಗಿ ವಿಗಂಡಿಸಿ, ಈ ಪ್ರಕಾರವಾಗಿ ತಮ್ಮ ವ್ಯಕ್ತಿತ್ವವನ್ನು ಬೆಳಸಬೇಕು ಎಂದು ವಿದ್ಯಾರ್ಥಿ, ಪೋಷಕರಿಗೆ ತಿಳಿಸಿದರು.

ಮೊಬೈಲ್ ಬಳಕೆಯ ಸಾಧಕ ಭಾದಕಗಳನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಬಂಟ್ವಾಳ ಜೈನ್ ಮಿಲನ್ ವತಿಯಿಂದ ವರ್ಷಂಪ್ರತಿ ನಡೆಯುವ ಪ್ರತಿಭಾ ಪುರಸ್ಕಾರ ನಿಧಿಗೆ ₹25000/ ಮೊತ್ತದ ದೇಣಿಗೆಯನ್ನು ವೀರ್ ವೃಷಭರಾಜ್ ಜೈನ್ ನೀಡಿದರು.

ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದ ಅಧ್ಯಕ್ಷ ವೀರ್ ಸುದರ್ಶನ್ ಜೈನ್ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ಹಾಗೂ ಜೀವನ ಶೈಲಿಗಳನ್ನು ಬೆಳೆಸಿ ಸಮಾಜಕ್ಕೆ ಉತ್ತಮ ಹೆಸರು ತರಬೇಕೆಂದು ವಿವರಿಸಿದರು, ಅಲ್ಲದೇ ಜೈನ್ ಮಿಲನ್ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿದ್ದು ದುಬೈ, ಲಂಡನ್, ಜರ್ಮನಿ ಹಾಗೂ ಆಸ್ಟ್ರೇಲಿಯಾದಲ್ಲಿ ನೂತನ ಜೈನ್ ಮಿಲನ್ ಶಾಖೆಗಳ ಬಗ್ಗೆ ಮಾಹಿತಿ ನೀಡಿದರು.

ವೀರಾಂಗನಾ ವಿಜಯಕುಮಾರಿ ಇಂದ್ರ ರವರು ಶ್ರಾವಕರಿಗೆ ರಸ ಪ್ರಶ್ನೆ ಕಾರ್ಯಕ್ರಮ ನಡೆಸಿ ಬಹುಮಾನ ವಿತರಿಸಲಾಯಿತು. ಮಿಲನ್ ಅಧ್ಯಕ್ಷ ವೀರ್ ಡಾ.ಸುದೀಪ್ ಕುಮಾರ್ ಎಲ್ಲರನ್ನೂ ಅಭಿನಂದಿಸಿದರು ಹಾಗೂ ವಿಶೇಷವಾಗಿ ಮಿಲನ್ ನಿಧಿಗೆ ದೇಣಿಗೆಯನ್ನು ನೀಡಿದ ವೀರ್ ವೃಷಭರಾಜ್ ಜೈನ್ ದಂಪತಿಗಳ ಸಮಾಜಮುಖಿ ಕಾಳಜಿಯನ್ನು ಪ್ರಶಂಸಿಸಿದರು.

ಮಿಲನ್ ಕಾರ್ಯದರ್ಶಿ ವೀರಾಂಗನಾ ಸನ್ಮತಿ ಜಯಕೀರ್ತಿ ಧನ್ಯವಾದ ಸಮರ್ಪಿಸಿದರು. ವೀರಾಂಗನಾ ವಿಜಯಕುಮಾರಿ ಇಂದ್ರ ಕಾರ್ಯಕ್ರಮ ನಿರೂಪಿಸಿದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...