Saturday, January 31, 2026

ಸಿದ್ದಕಟ್ಟೆ: ಧಾರ್ಮಿಕ ರಸಪ್ರಶ್ನೆ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ಜೈನ್ ಮಿಲನ್ ಸಂಯೋಜಿತ ಸಿದ್ದಕಟ್ಟೆ ಸ್ವಸ್ತಿಕ್ ಜೈನ ಯುವ ಸಂಘ ಮತ್ತು ಅನಂತಪದ್ಮ ಮಹಿಳಾ ಸಂಘ ಇದರ ಆಶ್ರಯದಲ್ಲಿ ಧಾರ್ಮಿಕ ರಸಪ್ರಶ್ನೆ ಸ್ಪರ್ಧೆ ನಲ್ಲೂರಂಗಡಿ ಬಸದಿ ಸಿದ್ದಕಟ್ಟೆಯಲ್ಲಿ ಜರಗಿತು.
ಬಂಟ್ವಾಳ ಜೈನ್ ಮಿಲನ್‌ನ ಜೂನ್ ತಿಂಗಳ ಮಾಸಿಕ ಸಭೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮವಾಗಿ ಮಿಲನ್ ಸದಸ್ಯರಿಗೆ ಹಾಗೂ ತಾಲೂಕಿನ ಜೈನ ಶ್ರಾವಕ ಸಮಾಜದವರಿಗೆ ಧಾರ್ಮಿಕ ರಸಪ್ರಶ್ನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರು ವರ್ಧಮಾನ್ ಜೈನ್ ಮಿಲನ್‌ನ ಸದಸ್ಯ, ಸಂಪನ್ಮೂಲ ವ್ಯಕ್ತಿ ಪಿ.ಅಭಿನಂದನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ರಸ ಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಜೈನ್ ಮಿಲನ್ ಅಧ್ಯಕ್ಷ, ಸಿದ್ದಕಟ್ಟೆ ವೈದ್ಯ ಡಾ.ಸುದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಭಾರತೀಯ ಜೈನ್ ಮಿಲನ್ ವಲಯ-೮ರ ಉಪಾಧ್ಯಕ್ಷ ಸುದರ್ಶನ್ ಜೈನ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಧಾರ್ಮಿಕ ಚಿಂತನೆಯಲ್ಲಿ ನಾವು ತೊಡಗಿಸಿಕೊಳ್ಳುವುದರಿಂದ ನಮ್ಮ ಧರ್ಮದ ಬಗ್ಗೆ ಒಂದಷ್ಟು ಚಿಂತನೆ ಮಾಡಲು ನಮ್ಮ ಸಮಯವನ್ನು ಬಳಸುವಂತಾಗುತ್ತದೆ ಎಂದು ನುಡಿದರು.


ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ಸಿದ್ದಕಟ್ಟೆ ಬಸದಿಯ ಮೊಕ್ತೇಸರ ಪ್ರಕಾಶ್ ಜಂಕಳ , ಮಾಜಿ ಅಧ್ಯಕ್ಷ ಪಚ್ಚಾಜೆಗುತ್ತು ಜಿನರಾಜ್ ಆರಿಗ, ಅನಂತ ಪದ್ಮ ಮಹಿಳಾ ಸಂಘದ ಅಧ್ಯಕ್ಷೆ ವಿನಯಾ ಅರ್ಕಕೀರ್ತಿ ಇಂದ್ರ, ಜೈನ್ ಮಿಲನ್ ಕಾರ್ಯದರ್ಶಿ ಸನ್ಮತಿ ಜಯಕೀರ್ತಿ ಉಪಸ್ಥಿತರಿದ್ದರು.
ತಾಲೂಕಿನ ವಿವಿಧ ಭಾಗಗಳಿಂದ ಮೂರು ಜನರನ್ನೊಳಗೊಂಡ ಹತ್ತು ತಂಡಗಳು ಈ ಕಾರ್ಯಕ್ರಮದಲ್ಲಿ ಸ್ಪರ್ಧಾಳುಗಳಾಗಿ ಭಾಗವಹಿಸಿದ್ದರು. ಒಟ್ಟು ಮೂರು ಸುತ್ತುಗಳಲ್ಲಿ ಜರಗಿದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಕೊನೆಯ ಸುತ್ತಿಗೆ ಆಯ್ಕೆಯಾದ ನಾಲ್ಕು ತಂಡಗಳಲ್ಲಿ ಮೂರು ತಂಡಗಳನ್ನು ಆಯ್ಕೆಮಾಡಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಮತ್ತು ಪ್ರೋತ್ಸಾಕರ ಬಹುಮಾನಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಪಿ.ಅಭಿನಂದನ್ ಕುಮಾರ್ ದಂಪತಿಯನ್ನು ಸನ್ಮಾನಿಸಲಾಯಿತು.
ಡಾ.ಸುದೀಪ್ ಕುಮಾರ್ ಸ್ವಾಗತಿಸಿದರು. ಸ್ವಸ್ತಿಕ್ ಜೈನ್ ಯುವ ಸಂಘದ ಅಧ್ಯಕ್ಷ ಪ್ರಥಮ್ ವಂದಿಸಿದರು. ವಿನಯ ಕುಮಾರ್ ನೆಕ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧಾ ಕಾರ್ಯಕ್ರಮದಲ್ಲಿ ಸುಮನ್ ಕುಮಾರ್, ಸುಜನ್, ಅಶೋಕ್ ಕುಮಾರ್, ಅರ್ಕಕೀರ್ತಿ ಇಂದ್ರ ಸಹಕರಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...