ಬಂಟ್ವಾಳ: ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ವತಿಯಿಂದ ೫ ದಿನಗಳ ಕಾಲ ನಡೆದ ೧೯ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಗಣೇಶನ ವಿಗ್ರಹದ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು.

ರವಿವಾರ ಸಂಜೆ ಸಂಧ್ಯಾಪೂಜೆ, ವಿಸರ್ಜನಾ ಪೂಜೆ ನಡೆದು ಬಳಿಕ ಬೆÊಪಾಸ್ ರಸ್ತೆ, ಭಂಡಾರಿಬೆಟ್ಟು ನೆರೆ ವಿಮೋಚನಾ ರಸ್ತೆಯ ಮೂಲಕ ಬಂಟ್ವಾಳ ಪೇಟೆಯ ಮುಖ್ಯರಸ್ತೆಯಲ್ಲಿ ಸಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ನೇತ್ರಾವತಿ ನದಿಗೆ ವಿಗ್ರಹವನ್ನು ಜಲಸ್ತಂಭನ ಮಾಡಲಾಯಿತು. ವಿವಿಧ ಸ್ತಬ್ದ ಚಿತ್ರಗಳು ಶೋಭಾಯಾತ್ರೆಗೆ ಮೆರುಗು ನೀಡಿದರು.


ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ, ಸಮಿತಿಯ ಅಧ್ಯಕ್ಷ ಬಿ.ಪದ್ಮಶೇಖರ್ ಜೈನ್, ಪದಾಽಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದರು.












