Saturday, July 12, 2025

“ಜನತಾ ಕರ್ಫ್ಯೂ” ಬೆಂಬಲಿಸಲು ಬಂಟ್ವಾಳ ಬಿ.ಜೆ.ಪಿ. ಅಧ್ಯಕ್ಷ ದೇವಪ್ಪ ಪೂಜಾರಿ ಮನವಿ

ಬಂಟ್ವಾಳ: ಇಡೀ ವಿಶ್ವವೇ ಒಂದು ರೀತಿಯಲ್ಲಿ ಆತಂಕಕ್ಕೆ ಒಳಗಾಗಿದೆ. ವಿಶ್ವಾದ್ಯಂತ ಹರಡಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಹಲವಾರು ಪ್ರಕರಣಗಳು ಪತ್ತೆಯಾಗಿದ್ದು, ಜನರು ಒಂದು ರೀತಿಯಲ್ಲಿ ಆತಂಕಕ್ಕೊಳಗಾಗಿದ್ದಾರೆ. ನಾಗರಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಆರೋಗ್ಯ ಇಲಾಖೆ ನೀಡಿರುವ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವೈರಸ್ ಹರಡದಂತೆ ಜಾಗೃತರಾಗಿ.
ನಾವು ಈ ದೇಶದ ಜವಾಬ್ದಾರಿಯುತ ನಾಗರೀಕರಾಗಿ ದೇಶದ ಜನರ ಆರೋಗ್ಯ ದೃಷ್ಟಿಯಿಂದ ನಾಳೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಈ ದೇಶದ ಪ್ರಧಾನ ಮಂತ್ರಿಯವರು ನೀಡಿರುವ ಕರೆಯನ್ನು ಗೌರವಿಸಿ “ಜನತಾ ಕರ್ಫ್ಯೂ”ವನ್ನು ಬೆಂಬಲಿಸಬೇಕಾಗಿ ಎಲ್ಲಾ ಸಂಘ ಸಂಸ್ಥೆಗಳಲ್ಲಿ, ಬಸ್ಸು, ಲಾರಿ, ಟ್ಯಾಕ್ಸಿ, ರಿಕ್ಷಾ ಚಾಲಕ-ಮಾಲಕರಲ್ಲಿ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳ ಮಾಲಕರಲ್ಲಿ ಹಾಗೂ ಎಲ್ಲಾ ಸಜ್ಜನ ನಾಗರಿಕ ಬಂಧುಗಳಲ್ಲಿ ವಿನಂತಿಸಿಕೊಳ್ಳುತ್ತಾ, ನೀವು ಬೆಂಬಲಿಸಿ ಉಳಿದವರನ್ನು ಬೆಂಬಲಿಸುವಂತೆ ಪ್ರೇರೇಪಿಸಿ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ. ಅಧ್ಯಕ್ಷ ದೇವಪ್ಪ ಪೂಜಾರಿ ಮನವಿ ಮಾಡಿದ್ದಾರೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...