Sunday, February 9, 2025

“ರನ್ ಫಾರ್ ನೈನ್”-ಕಾಲ್ನಡಿಗೆ ಜಾಥಾ

ವಿಟ್ಲ: ಜೆಸಿಐ ವಿಟ್ಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಟ್ಲ ನಾಡಕಚೇರಿಯಿಂದ ಕಾಲ್ನಡಿಗೆ ಜಾಥಾ “ರನ್ ಫಾರ್ ನೈನ್”  ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ  Region-G ವಲಯ ಉಪಾಧ್ಯಕ್ಷರಾದ JC. Royan Crasta ಅವರು ಚಾಲನೆ ನೀಡಿದರು. ಬಳಿಕ ಸ್ತ್ರೀಯರ ಮಾಸಿಕ ಋತುಚಕ್ರದ ಬಗ್ಗೆ ಇರುವ ಮೂಢನಂಬಿಕೆಗಳ ಕುರಿತಾಗಿ ಅರಿವು ಮೂಡಿಸುವ ಬಗ್ಗೆ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು Ln.Dr. ಗಾಯತ್ರಿ ಜಿ. ಪ್ರಕಾಶ್ ಇವರು ನಡೆಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು JFM ಬಾಲಕೃಷ್ಣ ವಿಟ್ಲ ವಹಿಸಿದ್ದರು. ಈ ಸಂಧರ್ಭದಲ್ಲಿ ವಲಯಾಧಿಕಾರಿಯಾದ JC ಬಾಬು ಕೆ. ವಿ.,Jcrt ಅಧ್ಯಕ್ಷೆ ಮಲ್ಲಿಕಾ B.S., ಲಯನ್ಸ್ ಕ್ಲಬ್ ಅಧ್ಯಕ್ಷೆ Ln. ವಿ. ಜಯ, JC ಮರಿಯಾ ಜ್ಯೋತಿ, ಪೂರ್ವಾಧ್ಯಕ್ಷರುಗಳಾದ JC ಅಣ್ಣಪ್ಪ ಸಾಸ್ತಾನ, JC.ರಮೇಶ್ B.K., JC.ಸಂಜೀವ M., JC ಲೂಯಿಸ್,  JC. ಚಂದ್ರಹಾಸ,  Jcrt ಶಿವಾನಿ ಬಿ. ಶೆಟ್ಟಿ, Jcrt ಉಷಾ ದಿನೇಶ್,Jcrt ಮಮತಾ ಸಂಜೀವ, Jcrt ಅಭಿಜ್ಞಾ  J.Rai, B.C.M.C. ಹಾಸ್ಟೆಲ್ ನ ಮೇಲ್ವಿಚಾರಕಿಯಾದ ಭವಾನಿ ಮತ್ತು JCI ನ ಎಲ್ಲಾ ಸದಸ್ಯರು, ವಿದ್ಯಾರ್ಥಿನಿಯರು ಭಾಗವಹಿಸಿದರು.

 

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...