Friday, February 14, 2025

ಫೆ. 15ರಂದು ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಜಾತ್ರೆ

ಪೆರಾಜೆ ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಕಾರ್ಯಕ್ರಮವು ಫೆಬ್ರವರಿ 15ರಂದು ಶನಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಬೆಳಗ್ಗೆ ಗಣಪತಿ ಹವನ ಹಾಗೂ ವಿವಿಧ ವೈದಿಕ ಹೋಮಗಳು ಮಧ್ಯಾಹ್ನ ಮಹಾಪೂಜೆ ಅನ್ನ ಸಂತರ್ಪಣೆ ಹಾಗೂ ಸಂಜೆ 6 ಗಂಟೆಗೆ ರಕ್ತೇಶ್ವರಿ ತಂಬಿಲ, ಭಜನೆ,ಶ್ರೀ ವಿಷ್ಣುಮೂರ್ತಿ ದೇವರಿಗೆ ಸಾರ್ವಜನಿಕ ಮಹಾ ರಂಗ ಪೂಜೆ ಬಳಿಕ ಕ್ಷೇತ್ರಪಾಲ ದೈವ ರಕ್ತೇಶ್ವರಿ ಗೆ ನೇಮ ನಡೆಯಲಿದೆ.

ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಅಧಿಕಾರಿಗಳು, ಜೀರ್ಣೋದ್ದಾರ ಸಮಿತಿಯವರು ಹಾಗೂ ಪೆರಾಜೆ ಗ್ರಾಮಸ್ಥರ ಪ್ರಕಟನೆ ತಿಳಿಸಿದೆ.

More from the blog

ಮಕ್ಕಳ ಹೆಸರು ಬದಲಾವಣೆಗೆ ಕೋರ್ಟ್ ನಲ್ಲಿ ದಾವೆ ಹೂಡಬೇಕಾಗಿಲ್ಲ

ಬೆಂಗಳೂರು: ಮಕ್ಕಳ ಹೆಸರು ಬದಲಾವಣೆಗೆ ಇನ್ನು ಮುಂದೆ ನ್ಯಾಯಾಲಯದಲ್ಲಿ ದಾವೆ ಹೂಡಬೇಕಾಗಿಲ್ಲ ಎಂಬ ಮಹತ್ತರವಾದ ತೀರ್ಪನ್ನು ಕರ್ನಾಟಕ ಉಚ್ಚನ್ಯಾಯಾಲಯ ಹೊರಡಿಸಿದೆ. ರಿಜಿಸ್ಟ್ರಾರದ ನಿರಾಕರಣೆ ನ್ಯಾಯಸಮ್ಮತವಲ್ಲ : ಜನನ ಪ್ರಮಾಣಪತ್ರದ ತಿದ್ದುಪಡಿಯ ಕುರಿತು ರಿಜಿಸ್ಟ್ರಾರ್ ನೀಡಿದ ನಿರಾಕರಣೆ,...

ಮುಲ್ಕಜೆಮಾಡ ಶ್ರೀ ಉಳ್ಳಾಳ್ತಿ ಉಳ್ಳಾಕ್ಲು ಕ್ಷೇತ್ರದ ಪೂರ್ವಭಾವಿ ಸಭೆ

ಬಂಟ್ವಾಳ :  ತಾಲೂಕಿನ ದೇವಸ್ಯಮೂಡುರು ಗ್ರಾಮದ ಮುಲ್ಕಜೆಮಾಡ ಶ್ರೀ ಉಳ್ಳಾಳ್ತಿ ಉಳ್ಳಾಕ್ಲು ಕ್ಷೇತ್ರ ಇದರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಶೇಕ ಹಾಗೂ ನೇಮೋತ್ಸವದ ಪ್ರಯುಕ್ತ ಫೆ. 13ರಂದು ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ...

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

  ಬೆಂಗಳೂರು:    ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ...

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶ: ಬಂಟ್ವಾಳ ತಾಲೂಕು ಸಮಿತಿ ಪ್ರಮುಖರ ಸಭೆ

  ಬಂಟ್ವಾಳ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗೀ ಸಹಿತ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ಆಮಂತ್ರಣ ಪತ್ರಿಕೆ...