Thursday, February 13, 2025

ಜೋಡುಮಾರ್ಗ ಜೇಸಿ ವತಿಯಿಂದ ಉಚಿತ ಮಧುಮೇಹ ತಪಾಸಣಾ ಶಿಬಿರ

ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿ ಹಾಗೂ ಅನುಯಶ್ ಆರೋಗ್ಯ ಪ್ರತಿಷ್ಠಾನ, ಪೂನಾ ಇದರ ಜಂಟಿ ಆಶ್ರಯದಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಬಿ.ಸಿ.ರೋಡಿನ ಹೃದಯ ಭಾಗವಾದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಬಿ.ಸಿ.ರೋಡಿನ ಪ್ರಖ್ಯಾತ ವೈದ್ಯರಾದ ಡಾ| ವೀಣಾ ತೋಳ್ಪಾಡಿಯವರು ಉದ್ಘಾಟಿಸಿ ಮಧುಮೇಹದಂತಹ ಕಾಯಿಲೆಗಳನ್ನು ಪ್ರಾರಂಭದಲ್ಲಿಯೇ ಗುರುತಿಸಿ ಅದಕ್ಕೆ ತಕ್ಕುದಾದಂತಹ ಚಿಕಿತ್ಸೆ ಹಾಗು ಆಹಾರ ಪದ್ಧತಿಯನ್ನು ರೂಢಿಸಿಕೊಂಡರೆ ಮಧುಮೇಹವನ್ನು ದೂರವಿರಿಸಬಹುದು ಎಂದು ಅವರು ತಿಳಿಸಿದರು.

ಹಾಗೂ ಈ ಕಾಯಿಲೆಯ ಬಗ್ಗೆ ಜನಸಾಮಾನ್ಯರಲ್ಲಿ ಇರುವಂತಹ ಸಂದೇಹಗಳ ಬಗ್ಗೆ ವಿವರಿಸಿದರು. ಜೇಸಿಐ ವಲಯ ೧೫ರ ಉಪಾಧ್ಯಕ್ಷರಾದ ದಾಮೋದರ ಪಾಟಾಳಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ತದನಂತರ ಸುಮಾರು ೨೫೦ ಕ್ಕೂ ಮಿಕ್ಕಿ ಸಾರ್ವಜನಿಕರಿಂದ ಅವರ ರಕ್ತದ ಮಾದರಿ ಸಂಗ್ರಹಿಸಿ ಅವರ ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಸ್ಥಳದಲ್ಲೇ ತಿಳಿಸಲಾಯಿತು. ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳು ೪ ಗೋಡೆಗಳ ನಡುವೆ ನಡೆಯುತ್ತಿದ್ದರಿಂದ ಜನಸಾಮಾನ್ಯರಿಗೆ ತ್ವರಿತವಾಗಿ ಇದರ ಪ್ರಯೋಜನ ಪಡೆಯುವಲ್ಲಿ ಕಷ್ವವಾಗುತ್ತಿದ್ದು. ಆದರೆ ಈ ಬಾರಿ ಹೊರಾಂಗಣದ ಜನನಿಬಿಡ ಪ್ರದೇಶದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರಿಂದ ಈ ಕಾರ್ಯಕ್ರಮವು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಯಿತು. ಅಧ್ಯಕ್ಷರಾದ ಹರ್ಷರಾಜ್ ಸಿ, ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಜೇಸಿರೆಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್, ಉಪಾಧ್ಯಕ್ಷರುಗಳಾದ ಧೀರಜ್ ಹೆಚ್, ಜಯರಾಜ್ ಎಸ್. ಬಂಗೇರ, ಗಾಯತ್ರಿ ಲೋಕೇಶ್, ಸುಧಾಕರ್ ವೈ, ಜೇಜೇಸಿ ಅಧ್ಯಕ್ಷ ರೋನಿತ್ ಉಪಸ್ಥಿತರಿದ್ದರು.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...