Monday, January 26, 2026

ಜೆಸಿಐ ವಲಯ ಮಧ್ಯಂತರ ಸಮಾವೇಶ: ವಿಟ್ಲ ಜೆಸಿಐ ಘಟಕಕ್ಕೆ ಹಲವು ಪ್ರಶಸ್ತಿ

ವಿಟ್ಲ: ಪುತ್ತೂರಿನ ಬಂಟರ ಭವನದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮಾವೇಶದಲ್ಲಿ ಜೆಎಫ್‌ಎಂ ಬಾಲಕೃಷ್ಣ ವಿಟ್ಲ ಇವರ ಅಧ್ಯಕ್ಷತೆಯ ವಿಟ್ಲ ಜೇಸಿಐ ಘಟಕ ನಾನಾ ವಿಭಾಗಗಳಲ್ಲಿ ಹತ್ತಾರು ಪ್ರಶಸ್ತಿಗಳನ್ನು ಪಡೆದು ಕೊಂಡಿದೆ.
ವಲಯ 15ರ ಜಿ ಪ್ರಾಂತ್ಯದಲ್ಲಿ, ಜಿ ಮತ್ತು ಡಿ (ಬೆಳವಣಿಗೆ ಮತ್ತು ಅಭಿವೃದ್ಧಿ) ವಿಭಾಗದ ’ಮುಂಗಾರಿನ ರಾಜ ರಾಣಿ ಪುರಸ್ಕಾರ’, ವಲಯ ಆಡಳಿತ ವಿಭಾಗದಿಂದ ಡೈಮಂಡ್ ಲೋಮ್ ಅವಾರ್ಡ್, ಕಾರ್‍ಯಕ್ರಮ ವಿಭಾಗದಲ್ಲಿ ಔಟ್ ಸ್ಟ್ಯಾಂಡಿಂಗ್ ಲೋಮ್ ಅವಾರ್ಡ್, ಪ್ರತಿಷ್ಠಿತ ಔಟ್ ಸ್ಟ್ಯಾಂಡಿಂಗ್ ಘಟಕಾಧ್ಯಕ್ಷ ಪ್ರಶಸ್ತಿ, ತರಬೇತಿ ವಿಭಾಗದಲ್ಲಿ ಮನ್ನಣೆ.. ಅಲ್ಲದೇ ಹಲವಾರು ವಿಶೇಷ ಮನ್ನಣೆಗಳು ಜೆಸಿಐ ವಿಟ್ಲ ಘಟಕಕ್ಕೆ ಸಂದಿದೆ. ಪ್ರಶಸ್ತಿ ಪ್ರದಾನ ಸಮಾವೇಶದಲ್ಲಿ ಜೆಸಿಐ ವಿಟ್ಲ ಘಟಕದ ಪೂರ್ವಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...