Wednesday, July 9, 2025

ಜೆಡಿಎಸ್ ಕಾರ್ಯಕರ್ತರ ಸಭೆ

ಬಂಟ್ವಾಳ : ಜೆಡಿಎಸ್ ಕಾರ್ಯಕರ್ತರ ಸಮಾಲೋಚನಾ ಸಭೆಯು ಬಿ.ಸಿ.ರೋಡ್ ರಿಕ್ಷಾಭವನದಲ್ಲಿ ಕ್ಷೇತ್ರ ಅಧ್ಯಕ್ಷ ಬಿ.ಮೋಹನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಅಮರನಾಥ ಶೆಟ್ಟಿ ಈ ಚುಣಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡಿದ್ದು ಮೈತ್ರಿ ಧರ್ಮ ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಕೇಂದ್ರ ಸರಕಾರದ ವೈಫಲ್ಯ ಹಾಗೂ ರಾಜ್ಯ ಸರಕಾರದ ಸಾಧನೆಯ ಬಗ್ಗೆ ವಿವರಣೆ ನೀಡಿದರು.
ರಾಜ್ಯ ಕಾರ್ಯದರ್ಶಿ ಮಹಮ್ಮದ್ ಶಫಿ ಮಾತನಾಡಿ ಪಕ್ಷ ಸಂಘಟನೆಗೆ ಜಿಲ್ಲಾ ನಾಯಕರು ಕ್ಷೇತ್ರದಲ್ಲಿ ನಿರಂತರ ವಾಗಿ ಸಂಪರ್ಕದಲ್ಲಿರುವಂತೆ ಹಾಗೂ ಪಕ್ಷದ ಕಛೇರಿ ತಕ್ಷಣ ತೆರೆಯಲು ಸಲಹೆ ನೀಡಿದರು.
ಕಾಂಗ್ರೆಸ್ ನಾಯಕರು ಚುನಾವಣಾ ಸಮಯದಲ್ಲಿ ನಮ್ಮ ಪಕ್ಷವನ್ನು ಹಾಗೂ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಂಡು ಹೋಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಹಾರೂನ್ ರ ಶೀದ್ ಜಿಲ್ಲೆಯ ನಾಯಕರಲ್ಲಿ ಮನವಿ ಮಾಡಿದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಯುವ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ, ಮಹಿಳಾ ಜಿಲ್ಲಾಧ್ಯಕ್ಷ ಸುಮತಿ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀರ್ಣ ಚಂದ್ರ ಜೈನ್, ಹಿರಿಯ ಮುಖಂಡರಾದ ಪಿ.ಎ.ರಹೀಂ , ಮಹಮ್ಮದ್ ಸುವಾಜ್ , ರ ಫೀಕ್ ಕೊಚ್ಚಿ , ಮಹಮ್ಮದ್ ಶಫಿಕ್, ಸುಲೈಮಾನ್ ಅಕ್ಕರಂಗಡಿ, ಹರೀಶ್ ಕೊಟ್ಟಾರಿ, ಇಸಾಕ್ ಕಲ್ಲಡ್ಕ, ಮಹಿಳಾ ಮುಖಂಡರಾದ ಕುಶಲ ಶೆಟ್ಟಿ, ಕೈರುನ್ನಿಸ ಉಪಸ್ಥಿತರಿದ್ದರು. ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಸ್ವಾಗತಿಸಿದರು. ಅಮಾನುಲ್ಲಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...